ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 

ವಚನ:
ಅಯ್ಯಾ, ನೀ ಮಾಡಲಾದ ಜಗತ್ತು, ಅಯ್ಯಾ ನೀ ಮಾಡಲಾದ ಸಂಸಾರ,
ಅಯ್ಯಾ, ನೀ ಮಾಡಲಾದ ಮರವೆ, ಅಯ್ಯಾ, ನೀ ಮಾಡಲಾದ ದುಃಖ,
ಅಯ್ಯಾ, ನೀ ಬಿಡಿಸಿದಡೆ ಬಿಟ್ಟಿತ್ತು ತಾಮಸ.
ಅಯ್ಯಾ ನಾನೀ ಮಾಯೆಯ ಗೆದ್ದೆನೆಂಬ ಹಮ್ಮಿನ್ನೇಕೆ
ಕೂಡಲಸಂಗಮದೇವಾ.
ಅರ್ಥ:
ಹೇ ಸೃಷ್ಟಿಕರ್ತ ಪರಮಾತ್ಮನೇ ಇದು ನೀನು ಮಾಡಿದ ಪ್ರಪಂಚ, ಈ ಪ್ರಪಂಚದಲ್ಲಿ ನಾನು ಸಂಸಾರದ, ಸುಖ- ದುಃಖಗಳ, ನೋವು-ನಲಿವುಗಳ ಬಂಧನದಲ್ಲಿ ಸಿಲುಕಿಕೊಂಡಿದ್ದೇನೆ. ಹೇ ಭಗವಂತ ಈ ಬಂಧನಗಳಿಂದ ನೀನು ಬಿಡಿಸಿದರೆ ಮಾತ್ರ ನಾನು ಈ ಮಾಯಾ ಪ್ರಪಂಚದಿಂದ ಬಿಡುಗಡೆಯಾಗಲು ಸಾಧ್ಯ. ನೀನು ಬಿಡುಗಡೆ ಮಾಡಿದ ನಂತರವೂ "ನಾನು ಈ ಮಾಯೆಯನ್ನು ಗೆದ್ದು ಬಿಟ್ಟೆನೆಂಬ" ಅಹಂಕಾರ ನನಗೇಕೆ ಬರುತ್ತದೆ ಭಗವಂತ..?
- ಶ್ವೇತಾ ಫಣಿವೇಣಿ