ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 

ವಚನ:
ಅಯ್ಯಾ, ನೀ ಮಾಡಲಾದ ಜಗತ್ತು, ಅಯ್ಯಾ ನೀ ಮಾಡಲಾದ ಸಂಸಾರ,
ಅಯ್ಯಾ, ನೀ ಮಾಡಲಾದ ಮರವೆ, ಅಯ್ಯಾ, ನೀ ಮಾಡಲಾದ ದುಃಖ,
ಅಯ್ಯಾ, ನೀ ಬಿಡಿಸಿದಡೆ ಬಿಟ್ಟಿತ್ತು ತಾಮಸ.
ಅಯ್ಯಾ ನಾನೀ ಮಾಯೆಯ ಗೆದ್ದೆನೆಂಬ ಹಮ್ಮಿನ್ನೇಕೆ
ಕೂಡಲಸಂಗಮದೇವಾ.
ಅರ್ಥ:
ಹೇ ಸೃಷ್ಟಿಕರ್ತ ಪರಮಾತ್ಮನೇ ಇದು ನೀನು ಮಾಡಿದ ಪ್ರಪಂಚ, ಈ ಪ್ರಪಂಚದಲ್ಲಿ ನಾನು ಸಂಸಾರದ, ಸುಖ- ದುಃಖಗಳ, ನೋವು-ನಲಿವುಗಳ ಬಂಧನದಲ್ಲಿ ಸಿಲುಕಿಕೊಂಡಿದ್ದೇನೆ. ಹೇ ಭಗವಂತ ಈ ಬಂಧನಗಳಿಂದ ನೀನು ಬಿಡಿಸಿದರೆ ಮಾತ್ರ ನಾನು ಈ ಮಾಯಾ ಪ್ರಪಂಚದಿಂದ ಬಿಡುಗಡೆಯಾಗಲು ಸಾಧ್ಯ. ನೀನು ಬಿಡುಗಡೆ ಮಾಡಿದ ನಂತರವೂ "ನಾನು ಈ ಮಾಯೆಯನ್ನು ಗೆದ್ದು ಬಿಟ್ಟೆನೆಂಬ" ಅಹಂಕಾರ ನನಗೇಕೆ ಬರುತ್ತದೆ ಭಗವಂತ..?
- ಶ್ವೇತಾ ಫಣಿವೇಣಿ