'ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗೃತಿಯಿರಲಿ'
ಲೋಕದರ್ಶನ ವರದಿ
ಅಂಕೋಲಾ: ಸಾಮಾಜಿಕ ಜಾಲತಾಣಗಳ ಉಪಯೋಗ ಒಂದು ಕಡೆಯಾದರೆ ಇನ್ನೊಂದೆಡೆಗೆ ಅದರಿಂದ ತಪ್ಪು ದಾರಿ ಹಿಡಿಯುವ ಸಮಾಜವನ್ನು ನಾವು ನೋಡುತ್ತಿದ್ದೇವೆ. ಇಂತಹ ಸೈಬರ್ ಪ್ರಕರಣಗಳಲ್ಲಿ ಸಿಲುಕಿಸುವ ಕೆಲ ವರಿಂದ ಪ್ರತಿಯೊಬ್ಬ ವ್ಯಕ್ತಿಗಳು ದೂರವಿರಬೇಕಿದೆ ಎಂದು ಜೆ.ಎಂ.ಎಫ್.ಸಿ. ನ್ಯಾಯಾಧಿಶ ಜೆ. ರಂಗಸ್ವಾಮಿ ಹೇಳಿದರು.
ಅವರು ಮಂಗಳವಾರ ಕೆ.ಎಲ್.ಇ. ಸಭಾಭವನದಲ್ಲಿ ಪೊಲೀಸ್ ಇಲಾಖೆ ಮತ್ತು ವಿವಿಧ ಸಂಘಟನೆಗಳ ಆಶ್ರ ಯದಲ್ಲಿ ಹಮ್ಮಿಕೊಂಡ ಸೈಬರ್ ಅಪರಾದಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾಥರ್ಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗೃತಿ ವಹಿಸಬೇಕು ಎಂದರು.
ಹೆಚ್ಚುವರಿ ನ್ಯಾಯಾಧೀಶ ರಾಜು ಶೇಡಬಾಳ್ಕರ ಮಾತನಾಡಿ ವ್ಯಸನ ಮುಕ್ತ ಸಮಾಜ ನಮ್ಮದಾ ಗಬೇಕಾಗಿದೆ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಬೇಕೋ ಅಷ್ಟು ಒಳ್ಳೆಯ ವಿಚಾರಗಳನ್ನು ಪಡೆದುಕೊಂಡು ಕೆಟ್ಟದರಿಂದ ದೂರವಿರಬೇಕು ಎಂದರು.
ವೇದಿಕೆಯಲ್ಲಿ ಸಿ.ಪಿ.ಐ ಪ್ರಮೋದಕುಮಾರ ಬಿ., ಪಿ.ಎಸ್.ಐ ಶ್ರೀಧರ, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಕಾರ್ತಿ ಕ, ಕೆ.ಎಲ್.ಇ. ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ವಿನಾಯಕ ಹೆಗಡೆ, ತಾಲೂಕಾ ಪತ್ರಕರ್ತ ಸಂಘದ ಕಾರ್ಯ ದರ್ಶಿ ಸುಭಾಷ ಕಾರೇಬೈಲ್, ನ್ಯಾಯವಾದಿ ಉಮೇಶ ನಾಯ್ಕ ಉಪಸ್ಥಿತರಿದ್ದು ಮಾತನಾಡಿದರು. ಉಪನ್ಯಾಸಕ ಮಂಜುನಾಥ ಇಟಗಿ ನಿರ್ವಹಿಸಿದರು. ಎನ್.ಸಿ.ಸಿ ಕಮಾಂಡರ ಜಿ.ಆರ್. ತಾಂಡೇಲ ವಂದಿಸಿದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 