ಕ್ರಿಕೆಟ್ ಬೆಟ್ಟಿಂಗ್ ಕಥೆಯಾಧಾರಿತ ’ಬ್ರ್ಯಟ್’ ನಾಳೆ ರಾಜ್ಯಾದ್ಯಂತ ಸಿನಿಮಾ ತೆರೆಗೆ
'Brat', based on the story of cricket betting, will hit cinema screens across the state tomorrow
ಡಾರ್ಲಿಂಗ್ ಕೃಷ್ಣ ಹಾಗೂ ನಿರ್ದೇಶಕ ಶಶಾಂಕ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ’ಬ್ರ್ಯಟ್’ ಸಿನಿಮಾ ಬಿಡುಗಡೆಗೆ ದಿನ ಗಣನೆ ಆರಂಭವಾಗಿದ್ದು ಇದೇ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಸಿನಿಮಾ ತೆರಿಗೆ ಬರುತ್ತಿದೆ. ಕನ್ನಡ, ತಮಿಳು, ತೆಲುಗು ಸೇರಿದಂತೆ ಐದು ಭಾಷೆಯಲ್ಲಿ ಸಿನಿಮಾ ನಿರ್ಮಾಣವಾಗಿದ್ದರು, ಕನ್ನಡದಲ್ಲಿ ಮಾತ್ರ ಇದೇ ಶುಕ್ರವಾರ (ಅ. 31) ಬಿಡುಗಡೆಗೊಳ್ಳಲಿದೆ.
ಕೆ.ವಿ.ಎನ್ ಪ್ರೊಡಕ್ಷನ್ ವಿತರಣ ಸಂಸ್ಥೆ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದೆ. ಈ ಚಿತ್ರದ ನಾಯಕಾನಾಗಿ ಡಾರ್ಲಿಂಗ್ ಕೃಷ್ಣ ನಟಿಸಿದ್ದು, ನಾಯಕಿಯಾಗಿ ಮನಿಷಾ ಕಂದಕೂರ್ ಅಭಿನಯ ಮಾಡಿದ್ದಾರೆ. ಮನಿಷಾಗೆ ಇದು ಕನ್ನಡ ಮೊದಲ ಸಿನಿಮಾ. ಉಳಿದಂತೆ ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಗಣದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಹಾಗೂ ಗಿರಿ ಮಹೇಶ್ ಸಂಕಲನ ಸಿನಿಮಾಗಿದೆ. ಮಂಜುನಾಥ್ ವಿ ಕಂದಕೂರ್ ಈ ಸಿನಿಮಾವನ್ನು ಡಾಲ್ಫಿನ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಇದೊಂದು ಅಪ್ಪ ಮಗನ ಸಂಘರ್ಷದ ಕಥೆಯಾಗಿದ್ದು, ತಂದೆಯ ಪಾತ್ರದಲ್ಲಿ ಅಚ್ಯುತ್ ಕುಮಾರ್ ನಟಿಸಿದ್ದಾರೆ. ಜೊತೆಗೆ ಚಿತ್ರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ವಿಷಯವನ್ನು ಹೇಳಲಾಗಿದೆ.
ಈಗಾಗಲೇ ಚಿತ್ರದ ಹಾಡುಗಳು ಮತ್ತು ಟ್ರೇಲರ್ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿದ್ದು ಸಿನಿಮಾ ಮೇಲೆ ನೀರೀಕ್ಷೆ ಮೂಡುವಂತೆ ಮಾಡಿದೆ. ಈ ಮೊದಲು ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಷನ್ನಲ್ಲಿ ರೀಲೀಸ್ ಆಗಿದ್ದ ’ಕೌಶಲ್ಯ ಸುಪ್ರಜಾ ರಾಮ’ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಆ ಕಾರಣದಿಂದಲೂ ಈ ಪ್ಯಾನ್ ಇಂಡಿಯಾ ಚಿತ್ರದ ಮೇಲೆ ಪ್ರೇಕ್ಷಕರು ತುಂಬಾ ಭರವಸೆ ಇಟ್ಟುಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 