‘ಕ್ಯಾನ್ಸರ್ ಸಾಂಕ್ರಾಮಿಕ ಕಾಯಿಲೆಯಲ್ಲ’
'Cancer is not a contagious disease'
ವಿಜಯಪುರ 07: ಕ್ಯಾನ್ಸರ್ ಸಾಂಕ್ರಾಮಿಕ ಕಾಯಿಲೆಯಲ್ಲ ಎಂದು ಬಿ.ಎಲ್.ಡಿ.ಇ ಡೀಮ್ಡ್ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆಯೋಜಿಸಿದ್ದ ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರ ಮತ್ತು ಜಾಗೃತಿ ಅಭಿಯಾನ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಮೊದಲು ಹೆಚ್ಚಾಗಿ ವೃದ್ಧಾಪ್ಯದಲ್ಲಿ ಕಂಡುಬರುತ್ತಿದ್ದ ನಾನಾಕ್ಯಾನ್ಸರ್ ಗಳು ಇಂದು ಯುವಕರಲ್ಲಿ ಕಾಣುತ್ತಿವೆ. ಕಾರಣ ತಂಬಾಕು, ಗುಟ್ಕಾ ಹಾಗೂ ಶರಾಬು ಸೇವನೆಯಂಥ ದುಶ್ಚಟಗಳು ಇದಕ್ಕೆ ಕಾರಣವಾಗಿವೆ. ಜೊತೆಯಾಗಿ ಊಟ ಮಾಡುವುದರಿಂದ ಮತ್ತು ಕೈಕುಲುಕುವುದರಿಂದ ಈ ಕಾಯಿಲೆ ಹರಡುವುದಿಲ್ಲ. ಶರೀರದ ಯಾವುದೇ ಭಾಗದಲ್ಲಿ ಶೀಘ್ರವಾಗಿ ಬೆಳೆಯುವ ನೋವಿಲ್ಲದ ಗಂಟುಗಳು, ನಿಯಂತ್ರಣವಿಲ್ಲದ ರಕ್ತಸ್ರಾವ, ಕಾರಣವಿಲ್ಲದೆ ಹಸಿವು ಮತ್ತು ಶರೀರದ ತೂಕ ಕಡಿಮೆಯಾಗುವುದು ಕ್ಯಾನ್ಸರ್ ರೋಗದ ಪ್ರಮುಖ ಲಕ್ಷಣಗಳಾಗಿರಬಹುದು. ಕ್ಯಾನ್ಸರ್ ರೋಗವನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ಅವರು ಹೇಳಿದರು.
ಬಿ.ಎಲ್.ಡಿ.ಇ. ಆಸ್ಪತ್ರೆಯಲ್ಲಿ ವಿವಿಧ ಕ್ಯಾನ್ಸರ್ ಸಂಬಂಧಿತ ರೋಗಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡಲು ತಜ್ಞ ವೈದ್ಯರ ಜೊತೆಗೆ ವಿಶ್ವ ದರ್ಜೆಯ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದೆ. ವಿಜಯಪುರ ಮತ್ತು ನೆರೆಯ ಜಿಲ್ಲೆಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ನಿರ್ಮಾಣ ಹಂತದಲ್ಲಿರುವ, ಪೂರ್ಣ ಪ್ರಮಾಣದ ಸುಸಜ್ಜಿತ ಬಿ.ಎಲ್.ಡಿ.ಇ. ಕ್ಯಾನ್ಸರ್ ಆಸ್ಪತ್ರೆ ಶೀಘ್ರದಲ್ಲಿ ತಲೆಎತ್ತಲಿದೆ ಎಂದು ಅವರು ಹೇಳಿದರು.
ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಮಾತನಾಡಿ, ಕ್ಯಾನ್ಸರ್ ರೋಗವು ದುಶ್ಚಟಗಳಿಂದ ಅಷ್ಟೇ ಅಲ್ಲದೆ ಅನುವಂಶಿಕವಾಗಿ ಮತ್ತು ಕೆಲವು ವೈರಸ್ ಸೋಂಕುಗಳಿಂದಲೂ ಬರಬಹುದು. ಇಂಥ ಸಂದರ್ಭಲ್ಲಿ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣೆಯಿಂದ ರೋಗಲಕ್ಷಣಗಳು ಕಾಣುವ ಪೂರ್ವದಲ್ಲಿಯೇ ರೋಗವನ್ನು ಕಂಡುಹಿಡಿದು ಗುಣಪಡಿಸಬಹುದಾಗಿದೆ ಎಂದು ಹೇಳಿದರು. ಭಾರತೀಯ ವೈದ್ಯಕೀಯ ಸಂಘ ವಿಜಯಪುರದ ಅಧ್ಯಕ್ಷ ಡಾ. ಗೀರೀಶ ಕುಲ್ಲೊಳ್ಳಿ ಮಾತನಾಡಿ, ಕ್ಯಾನ್ಸರ್ ರೋಗವು ಮಾರಣಾಂತಿಕ ಕಾಯಿಲೆಯಾಗಿದ್ದು ಇದರ ಭಯ ಬೇಡ, ಎಚ್ಚರವಿರಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ. ಎಂ. ಬಿ. ಪಾಟೀಲ, ಡಾ. ವಿಕ್ರಂ ಸಿಂದಗಿಕರ, ಡಾ. ದಯಾನಂದ ಬಿರಾದಾರ, ಡಾ. ನಾಗರಾಜ ಬಿರಾದಾರ, ಡಾ. ಭುವನೇಶ್ವರಿ, ಡಾ. ಪ್ರೀತಿ ಮಾಲಪುರೆ, ಐಎಂಎ ಕಾರ್ಯದರ್ಶಿ ಡಾ. ವಿಜಯ ಪಾಟೀಲ ಮತ್ತು ಕಿರಿಯ ವೈದ್ಯರು ಉಪಸ್ಥಿತರಿದ್ದರು. ಈ ಸಪ್ತಾಹ ಶಿಬಿರದಲ್ಲಿ ಸುಮಾರು 350ಕ್ಕೂ ಹೆಚ್ಚು ರೋಗಿಗಳು ತಪಾಸಣೆ ಮಾಡಿಸಿಕೊಂಡರು. ಅಗತ್ಯವಿರುವ ರೋಗಿಗಳು ವಿಶೇಷ ತಪಾಸಣೆಗಳಾದ ಮೆಮೊಗ್ರಾಫಿ, ಸೂಜಿ ತಪಾಸಣೆ (ಈಓಂಅ), ಬಯಾಪ್ಸಿ, ಸ್ಕ್ಯಾನಿಂಗ್ಗಳಿಗೆ ಒಳಪಟ್ಟು ಸೂಕ್ತ ಚಿಕಿತ್ಸೆಯನ್ನು ಪಡೆದರಿರ. ಪ್ರತಿದಿನ ತಜ್ಞ ವೈದ್ಯರು ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕ್ಯಾನ್ಸರ್ ಜಾಗೃತಿ ಅಭಿಯಾನ ಸಪ್ತಾಹದ ಅಂಗವಾಗಿ ಕ್ಯಾನ್ಸರ್ ತಜ್ಞರಾದ ಡಾ. ಸಂಜೀವ ರಾಠೋಡ ಮತ್ತು ಡಾ. ರಾಜಶ್ರೀ ಯಲಿವಾಳ ಅವರು ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆಬ್ರವರಿ 4 ರಂದು ಕ್ಯಾನ್ಸರ್ ಜಾಗೃತಿ ಕುರಿತು ಉಪನ್ಯಾಸ ನೀಡಿದರಿರ. ಮತ್ತೋರ್ವ ಕ್ಯಾನ್ಸರ್ ತಜ್ಞರಾದ ಡಾ.ಶೈಲೇಶ.ಕನ್ನೂರ ಅಂದೇ, ಬಿ.ಎಲ್.ಡಿ.ಇ. ಎಫ್.ಎಂ. ರೇಡಿಯೋ ಬಾನುಲಿಯಲ್ಲಿ ಕ್ಯಾನ್ಸರ್ ಜಾಗೃತಿಯ ಕುರಿತು ಮಾತನಾಡಿದರು.
ಕಾಲೇಜಿನ ವೈಜ್ಞಾನಿಕ, ಶೈಕ್ಷಣಿಕ ಮತ್ತು ಸಂಶೋಧನಾ ಸಮಿತಿಯ ಸಹಯೋಗದಲ್ಲಿ ಸಪ್ತಾಹದ ಅಂಗವಾಗಿ ಧ್ಯೇಯ ವಾಕ್ಯ ಅನನ್ಯತೆಯಿಂದ ಒಂದುಗೂಡಿದೆ ವಿಷಯದ ಕುರಿತು, ಕ್ರಮವಾಗಿ ಸ್ನಾತಕೋತ್ತರ ಮತ್ತು ಸ್ನಾತಕ ವೈದ್ಯಕೀಯ ವಿದ್ಯಾರ್ಥಿಗಳಿಗೆ ಏರಿ್ಡಸಿದ್ದ ನಿಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ,ವಿಜೇತರಾದ ಡಾ. ಶಮೀನ್, ಡಾ. ಆಸ್ಮಾ, ಕಮಲದಿನ್ನಿ, ಡಾ. ಪ್ರತಿಕ್ಷಾ ರಾವ್, ಪ್ರಿಯಾಂಕಾ ಕಲೂತಿ, ಸಾಹೆಲ್ ನಾಕವಡೆ, ಸಖಿ ದೂಧಖಟೆ ಅವರಿಗೆ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಅಭಿನಂದನೆ ಸಲ್ಲಿಸಿದರು.
ಈ ಸ್ಪರ್ಧೆಗಳಲ್ಲಿ ಡಾ. ಎಂ. ಬಿ. ಪಾಟೀಲ, ಡಾ. ಎಸ್. ಎಸ್. ಕಲ್ಯಾಣಶೆಟ್ಟರ, ಡಾ. ವಿಜಯಾ ಪಾಟೀಲ ಮತ್ತು ಡಾ. ಲತಾದೇವಿ ತೀರ್ುಗಾರಾಗಿ ಕಾರ್ಯ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 