‘ಗಣೇಶ ಉತ್ಸವಕ್ಕೆ ಡಿಜೆ ಬಳಸುವಂತಿಲ್ಲ: ಸಿಪಿಐ ಹನಮಂತ ಸಣಮನಿ
'DJs cannot be used for Ganesh festival': CPI's Hanamantha Sanamani
ಬೀಳಗಿ 14: ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ದಿನದ ಮೆರವಣಿಗೆಯಲ್ಲಿ ಡಿಜೆ ಬಳಸುವಂತಿಲ್ಲ ಸಮಯ ಪಾಲನೆ ಮಾಡಬೇಕು. ಒಂದು ವೇಳೆ ಡಿಜೆ ಬಳಸಿರುವುದು ಕಂಡು ಬಂದರೆ ತಕ್ಷಣವೇ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ಹನಮಂತ ಸಣಮನಿ ಹೇಳಿದರು.
ಸ್ಥಳೀಯ ಪೋಲಿಸ್ ಠಾಣಾ ಕಚೇರಿಯಲ್ಲಿ ಬುಧವಾರ ನಡೆದ ಗಣೇಶ ಉತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹತ್ವದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ‘ಮುಂಬರುವ ಗಣೇಶ ಉತ್ಸವವನ್ನು ತಾಲ್ಲೂಕಿನಾದ್ಯಂತ ಪರಿಸರ ಸ್ನೇಹಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೌಹಾರ್ದದಿಂದ ಆಚರಿಸಬೇಕು’ ಎಂದು ತಿಳಿಸಿದರು. ತಹಶೀಲ್ದಾರ್ ವಿನೋದ ಹತ್ತಳ್ಳಿ ಮಾತನಾಡಿ ‘ತಾಲ್ಲೂಕಿನಲ್ಲಿ ಪಿಒಪಿ ಹಾಗೂ ರಾಸಾಯನಿಕ ಬಣ್ಣ ಹೊಂದಿರುವ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹ, ಮಾರಾಟ ನಿಷೇಧಿಸಬೇಕು. ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಬಳಸಬೇಕು. ನದಿ , ಹಳ್ಳ, ಕೆರೆ, ಬಾವಿ ಇವುಗಳ ನೀರು ಮಾಲಿನ್ಯವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಸ್ಥಳೀಯ ಸಿದ್ದೇಶ್ವರ ಜಾತ್ರೆಯನ್ನು ಭಾವೈಕ್ಯತೆಯಿಂದ ಆಚರಿಸಬೇಕು. ವಾಹನಗಳಲ್ಲಿ ಜಾತ್ರೆಗೆ ಆಗಮಿಸುವ ಭಕ್ತರು ಸಿದ್ದೇಶ್ವರ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಹಾಗೂ ರುದ್ರಗೌಡ ಪಾಟೀಲ್ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಪಟ್ಟಣ ಪಂಚಾಯತ ಅಧ್ಯಕ್ಷ ಮುತ್ತು ಬೊರ್ಜಿ, ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಸದಸ್ಯರಾದ ರಾಜು ಬೊರ್ಜಿ, ಅಜ್ಜುಬಾಯಿ ಸರ್ಕಾರ, ಸಿದ್ದು ಸಾರಾವರಿ, ಡಿಎಸ್ಎಸ್ ಮುಖಂಡ ಮಾಹಾದೇವ ಹಾದಿಮನಿ,ಯಲ್ಲಪ್ಪ ಮೇಟಿ, ಶ್ರೀಶೈಲ ಜೋಗೆನ್ನವರ, ಸೋಮು ಕೂಗಟಿ ಇದ್ದರು. ಬೀಳಗಿ ಪೋಲಿಸ್ ಠಾಣಾ ಕಚೇರಿಯಲ್ಲಿ ಬುಧವಾರ ನಡೆದ ಗಣೇಶ ಉತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಉದ್ದೇಶಿಸಿ ಸಿಪಿಐ ಎಚ್.ಬಿ.ಸಣಮನಿ ಮಾತನಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 