ನರಗುಂದದಲ್ಲಿ ನಡೆದ ಹೋರಾಟದ ಕಥೆ ಒಳಗೊಂಡ ‘ಧೀರ ಭಗತ್ ರಾಯ್’
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಕಾಟೇರ’ ಮಾದರಿಯ ನಮ್ಮ ಮಣ್ಣಿನ (ಉತ್ತರ ಕರ್ನಾಟಕ) ಸೊಗಡಿನ, ಹೋರಾಟದ ಕಥೆ ಒಳಗೊಂಡ ‘ಧೀರ ಭಗತ್ ರಾಯ್’ ಸಿನಿಮಾ ಈ ಶುಕ್ರವಾರ (ಡಿ. 6) ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈಗಾಗಲೇ ಟ್ರೇಲರ್, ಹಾಡುಗಳಿಂದ ಪ್ರಶಂಸೆ ಪಡೆದಿರುವ ಈ ಚಿತ್ರದ ನಾಯಕನಾಗಿ ರಂಗಭೂಮಿ ಹಿನ್ನೆಲೆಯಿಂದ ಬಂದ ರಾಕೇಶ್ ದಳವಾಯಿ ಅಭಿನಯ ಮಾಡಿದ್ದಾರೆ. ಕರ್ಣನ್ ಎಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ 1970ರ ದಶಕದಲ್ಲಿ ಜಾರಿಗೆ ಬಂದ ಭೂಮಿ ಸುಧಾರಣೆ ಕಾಯ್ದೆಯಿಂದ ನರಗುಂದದಲ್ಲಿ ಒಂದಷ್ಟು ರೈತರಿಗೆ ಭೂಮಿ ಸಿಗುತ್ತದೆ. ಆದರೆ ಅಲ್ಲಿನ ಭೂ ಮಾಲೀಕ ಜನರಿಗೆ ಸರಿಯಾಗಿ ಸಿಗಲು ಬಿಡದೆ ಜಮೀನನ್ನು ಕಬ್ಜ ಮಾಡಿರುತ್ತಾರೆ. ಅದನ್ನು ಚಿತ್ರ ನಾಯಕ ಜನರಿಗೆ ತಲುಪಿಸಲು ನಡೆಯುವ ಹೋರಾಟ, ಸಂಘರ್ಷ ಚಿತ್ರದ ಕಥಾವಸ್ತು. ರಾಕೇಶ್ ದಳವಾಯಿ ಇದರಲ್ಲಿ ಲಯರ್ ಪಾತ್ರ ನಿರ್ವಯಿಸಿದ್ದಾರೆ. ಚಿತ್ರದ ನಾಯಕಿಯಾಗಿ ಸುಚರಿತಾ ಸಹಾಯರಾಜ್ ನಟಿಸಿದ್ದು, ಇವರಿಲ್ಲಿ ಸಾವಿತ್ರಿ ಎಂಬ ಪಾತ್ರ ಮಾಡಿದ್ದು, ತುಂಬಾ ಜನಕ್ಕೆ ಸ್ಫೂರ್ತಿಯಾಗಲಿದೆ ಎನ್ನಬಹುದು. ಅಂದಂಗೆ ಇದು ಸುಚರಿತಾ ಅವರ ಮೊದಲ ಸಿನಿಮಾ.
ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಧೀರ ಭಗತ್ ರಾಯ್’. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟದ ಕಥೆ ಒಳಗೊಂಡ ಈ ಚಿತ್ರಕ್ಕೆ ಪೂರ್ಣ ಚಂದ್ರ ತೇಜಸ್ವಿ ಸಂಗೀತ, ಎಂ.ಸೆಲ್ವಂ ಜಾನ್ ಛಾಯಾಗ್ರಹಣ, ವಿಶ್ವ ಎನ್.ಎಂ ಸಂಕಲನವಿದೆ. ಶ್ರೀ ಓಂ ಸಿನಿ ಎಂಟರ್ಟೈನರ್ಸ್ ಹಾಗೂ ವೈಟ್ ಲೋಟಸ್ ಎಂಟರ್ಟೈನ್ಮೆಂಟ್ ಬ್ಯಾನರ್ನಲ್ಲಿ ಚಿತ್ರ ನಿರ್ಮಾಣ ಮಾಡಲಾಗಿದೆ. ಅಂದಂಗೆ ಶರತ್ ಲೋಹಿತಾಶ್ವ ಖಳನಟನ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಪ್ರವೀಣ್ ಹಗಡೂರು, ಮಠ ಕೊಪ್ಪಳ, ಸುಧೀರ್ ಕುಮಾರ್ ಮುರೊಳ್ಳಿ, ಶಶಿಕುಮಾರ್, ಫಾರೂಕ್ ಅಹ್ಮದ್, ಚಂದ್ರಿಕಾ ಗೌಡ, ನಯನ, ಸಿದ್ದಾರ್ಥ್ ಗೋವಿಂದ್, ಅನಿಲ್ ಹೊಸಕೊಪ್ಪ, ಪ್ರೊಫೇಸರ್ ಹರಿರಾಮ್, ಪಿ ಮೂರ್ತಿ, ಹೆಮಾನುಷ್ ಗೌಡ, ರಮೇಶ್ ಕುಮಾರ್, ಸಂದೇಶ್ ಮುಂತಾದವರು ತಾರಾಗಣದಲ್ಲಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 