ಚಂದನ ವಾಹಿನಿಯಲ್ಲಿ 'ಗಾನ ಚಂದನ'
ಬೆಂಗಳೂರು, ಅ 03: ನಾಡಿನ ಹೆಮ್ಮೆಯ ದೂರದರ್ಶನ ಚಂದನವಾಹಿನಿಯಲ್ಲಿ ಗಾಯನ ಪ್ರತಿಭಾನ್ವೇಷಣೆಯ ವಿನೂತನ ಕಾರ್ಯಕ್ರಮ "ಗಾನ ಚಂದನ" ಪ್ರಾರಂಭವಾಗಿದೆ. ಹೆಸರಾಂತ ನಟ ರಾಘವೇಂದ್ರ ರಾಜಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ಹಾಡಿ, ಶುಭ ಕೋರಿದರು. ಕರ್ನಾಟಕದ ಪ್ರತಿ ಜಿಲ್ಲೆಗಳ ನೈಜ, ಸಹಜ ಗಾನಪ್ರತಿಭೆಗಳನ್ನು ಹೆಕ್ಕಿ, ಸೂಕ್ತ ಮಾರ್ಗದರ್ಶನಗಳೊಂದಿಗೆ ಗಾಯನಕಲೆಗೆ ಉತ್ತೇಜನ ನೀಡಲಾಗುತ್ತದೆ. ದೂರದರ್ಶನದ ಭವ್ಯವಾದ ಸೆಟ್ ನಲ್ಲಿ, ಸುಪ್ರಸಿದ್ಧ ಹಿನ್ನೆಲೆ ಗಾಯಕಿ ಬಿ.ಆರ್. ಛಾಯಾ ಹಾಗೂ ಜನಪ್ರಿಯ ಸಂಗೀತ ನಿದರ್ೆಶಕ -ಸಿನೆಮಾ ಸಾಹಿತಿ ಶ್ರೀ ತ.ಮನೋಹರ್ ರ ಸಮಕ್ಷಮದಲ್ಲಿ, ವಿನೂತನ ಗಾನತಂತ್ರಗಳೊಂದಿಗೆ "ಗಾನ ಚಂದನ" ಎಲ್ಲರ ಮನೆ-ಮನಗಳಿಗೆ ಅಕ್ಟೋಬರ್ 2 ರಿಂದ ತಲುಪುತ್ತಿದೆ. ಕಿರುತೆರೆಯ ಪ್ರತಿಭಾವಂತ ಕಲಾವಿದ ಜೋಡಿ ವಿಕ್ರಂ ಸೂರಿ ಮತ್ತು ನಮಿತಾರ ನಿರೂಪಣೆಯಲ್ಲಿ ರಾತ್ರಿ 8 ರಿಂದ 9ಘಂಟೆಯವರೆಗೆ ಈ ಕಾರ್ಯಕ್ರಮ ಮೂಡಿ ಬರಲಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 