ಬಾಹುಬಲಿ ಉಪಾಧ್ಯೆಗೆ ‘ಜೀವನ ಜ್ಯೋತಿ’ ರಾಷ್ಟ್ರೀಯ ಪ್ರಶಸ್ತಿ
'Jivana Jyoti' National Award for Baahubali Upadhyay
ಕಾಗವಾಡ 06: ಅನ್ನ, ಆರೋಗ್ಯ, ಶಿಕ್ಷಣವೆಂಬ ಘೋಷವಾಕ್ಯದೊಂದಿಗೆ ದೀನ ದಲಿತರ ಮತ್ತು ನೊಂದವರ ಸೇವೆಯಲ್ಲಿ ಕಳೆದ 1 ವರ್ಷದಿಂದ ತೊಡಗಿಸಿಕೊಂಡಿರುವ ತಾಲೂಕಿನ ಜುಗೂಳ ಗ್ರಾಮದ ಸಿದ್ಧಿ ಹುಮ್ಯಾನಿಟಿ ಫೌಂಡೇಶನ್ನ ಕಾರ್ಯಕ್ಕೆ ರಾಷ್ಟ್ರೀಯ ಮಟ್ಟದ ಜೀವನ ಜ್ಯೋತಿ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಕನಸು ಡಿಜಿಟಲ್ ಸಲ್ಯೂಶನ್ಸ್ ಮತ್ತು ಎನ್.ಎಚ್.ಎಲ್ ವರ್ಲ್ಡ ಯುನಿಕ್ ಇವೆಂಟ್ಸ್ ನ್ಯೂಸ್ ಮತ್ತು ಅರ್ಗನೈಜೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ನಯನ ಸಭಾ ಭವನದಲ್ಲಿ ಮಾ. 3 ರಂದು ನಡೆದ ಸಾಂಸ್ಕೃತಿಕ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲಿ ಸಾಧನೆ ಮಾಡಿರುವ ಸಾಧಕರಿಗೆ ರಾಷ್ಟ್ರೀಯ ಮಟ್ಟದ ಜೀವನ ಜ್ಯೋತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿಗೆ ಜುಗೂಳ ಗ್ರಾಮದ ಸಿದ್ಧಿ ಹುಮ್ಯಾನಿಟಿ ಫೌಂಡೇಶನ್ ಕೂಡಾ ಆಯ್ಕೆಗೊಂಡಿದ್ದು, ಫೌಂಡೇಶನ್ನ ಅಧ್ಯಕ್ಷ ಬಾಹುಬಲಿ ಉಪಾಧ್ಯೆ ಅವರನ್ನು ಸಮಾರಂಭದಲ್ಲಿ ಪ್ರಶಸ್ತಿ ನೀಡಿ, ಸನ್ಮಾನಿಸಲಾಗಿದೆ.
ಈ ಸಮಾರಂಭದಲ್ಲಿ ಸಂಘಟನೆಯ ನಿರ್ದೇಶಕರಾದ ಲಾವಣ್ಯಾ ವಿನೋದ, ರಾಕೇಶ ಕೆ.ಎಸ್., ಸುರೇಶ ಕುಮಾರ ಮತ್ತು ಬೆಳಗಾವಿ ಅಣ್ಣಪೂರ್ಣೆಶ್ವರಿ ಫೌಂಡೇಶನ್ನ ಅಧ್ಯಕ್ಷ ಮಹಾಂತೇಶ ಕಡಲಗಿ ಉಪಸ್ಥಿತರಿದ್ದರು.
ಸಿದ್ಧಿ ಹುಮ್ಯಾನಿಟಿ ಫೌಂಡೇಶನ್ಗೆ ಈಗಾಗಲೇ ಅನೇಕ ಸಂಘ-ಸಂಸ್ಥೆಗಳಿಂದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅತ್ಯುತ್ತಮ ಸೋಶಿಯಲ್ ವರ್ಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಈಗ ಈ ಪ್ರಶಸ್ತಿ ಲಭಿಸಿದ್ದರಿಂದ ಅವರಿಗೆ ಅಭಿನಂದನೆಗಳು ಹರಿದು ಬರುತ್ತಿವೆ.
ಈ ವೇಳೆ ಫೌಂಡೇಶನ್ನ ಅಧ್ಯಕ್ಷ ಬಾಹುಬಲಿ ಉಪಾಧ್ಯೆ ಮಾತನಾಡಿ, ಬಡವರಿಗಾಗಿ ಸದಾ ಕಾಲ ಅನ್ನದಾನ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಉತ್ತಮವಾಗಿ ಕೆಲಸ ಮಾಡಬೇಕು. ಮತ್ತು ನಮ್ಮ ಗ್ರಾಮದಲ್ಲಿ ಒಂದು ಗೋಶಾಲೆಯನ್ನು ನಿರ್ಮಾಣ ಮಾಡಬೇಕು. ನಿರ್ಗತಿಕರಿಗಾಗಿ ವೃದ್ಧಾಶ್ರಮ ನಿರ್ಮಿಸಿ, ಜನರ ಸೇವೆ ಮಾಡುವ ಆಶಯ ಹೊಂದಿದ್ದೇವೆ ಎಂದು ತಮ್ಮ ಮನದಾಳದ ಇಂಗಿತವನ್ನು ಹಂಚಿಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 