ಕರಾವಳಿ ಹುಲಿವೇಷ ಸಂಸ್ಕೃತಿಯ ಪ್ರತಿಬಿಂಬ ‘ಮಾರ್ನಮಿ’

ನೀರೀಕ್ಷೆ ಹೆಚ್ಚಿಸಿದ ರಿತ್ವಿಕ್, ಚೈತ್ರಾ ಜೆ ಆಚಾರ್ ಪ್ರೇಮಕಥೆಯ ಟೈಟಲ್ ಟೀಸರ್ 

ನಟ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರ ‘ಮಾರ್ನಮಿ’. ‘ಪಿಂಗಾರ’ ಚಿತ್ರಕ್ಕೆ ರಾಷ್ಟ್ರ್ಟ್ರ​‍್ರಶಸ್ತಿ ಪಡೆದಿರುವ ಪ್ರೀತಂ ಆರ್ ಶೆಟ್ಟಿ ಗರಡಿಯಲ್ಲಿ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ರಿಶಿತ್ ಶೆಟ್ಟಿ ಚೊಚ್ಚಲ ಪ್ರಯತ್ನವೇ ಈ ‘ಮಾರ್ನಮಿ’. ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿರುವ ಸಂಗೀತ ನಿರ್ದೇಶಕ ಚರಣ್ ರಾಜ್, ‘ತುಂಬಾ ಖುಷಿಯಾಗುತ್ತಿದೆ. ಹೊಸ ತಂಡ ಹೊಸ ನಿರ್ದೇಶಕರು. ಈ ತಂಡದಲ್ಲಿ ನನ್ನ ಅಚ್ಚುಮೆಚ್ಚಿನ ನಟರು ಎಲ್ಲಾ ಇದ್ದಾರೆ. ತುಂಬಾ ಒಳ್ಳೆ ಕಥೆ. ನನಗೂ ಒಳ್ಳೆ ಅವಕಾಶ ಇದೆ ಎನಿಸಿತು. ನನಗೂ ಅವಕಾಶ ಪಡೆದುಕೊಂಡಿದ್ದೇನೆ. ಸಂಗೀತದ ಕೆಲಸ ಶುರು ಮಾಡಿದ್ದೇವೆ. ಟೈಟಲ್ ಟೀಸರ್ ಮಾಡಿದ್ದೇವೆ. ಹಾಡುಗಳ ಕಂಪೋಸ್ ಮಾಡಲು ಶುರು ಮಾಡಿದ್ದೇವೆ. ಇಷ್ಟೇ ಸಾಂಗ್ ಇದೆ ಅಂತಾ ಡಿಸೈಡ್ ಮಾಡಿಲ್ಲ. ಆದರೆ ಐದು ಹಾಡುಗಳು ಇರುತ್ತವೆ’ ಎಂದರು. 

ನಂತರ ನಿರ್ದೇಶಕ ರಿಶಿತ್ ಶೆಟ್ಟಿ ಮಾತನಾಡಿ, ‘ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್, ಅಸೋಸಿಯೆಟ್ ಆಗಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. ಪ್ರೀತಂ ಶೆಟ್ಟಿ ಅವರ ಜೊತೆ ಒಂದಷ್ಟ್ಟು ಚಿತ್ರಗಳಿಗೆ ಕೆಲಸ ಮಾಡಿದ್ದೇನೆ. ಮಂಗಳೂರಲ್ಲಿ ಸ್ಕ್ರಿಪ್ಟ್‌ ಕೆಲಸಕ್ಕೆ ಹೋಗಿದ್ದಾಗ ಸುಧಿ ಪರಿಚಯವಾಗಿದ್ದು. ಅವರು ಒಂದು ಕಥೆ ಮಾಡಿಕೊಂಡಿದ್ದರು. ಅವರು ಡೈರೆಕ್ಷನ್ ಮಾಡಲು ಇಷ್ಟಇಲ್ಲ ಅಂದಾಗ ನಾನು ಕಥೆ ಕೇಳಿದೆ. ಅವರು ಪ್ರೀತಿಯಿಂದ ಕೊಟ್ಟರು. ರಿತ್ವಿಕ್ ಅವರಿಗೆ ಹೇಳಿದೆ. ಅವರು ಇದಕ್ಕೆ ಏನೋ ಬೇಕೋ ಅನಿಸುತ್ತಿದೆ ಎಂದರು. ಬಳಿಕ 6 ತಿಂಗಳ ವರ್ಕ್‌ ಮಾಡಿಕೊಂಡು ಅವರ ಬಳಿ ಹೋದೆ. ಅವರು ಕಥೆ ಕೇಳಿ ಖುಷಿಪಟ್ಟರು. ಬಳಿಕ ಪ್ರೊಡ್ಯೂಸರ್ ಹುಡುಕಾಟದಲ್ಲಿ ನಿಶಾಂತ್ ಸರ್ ಭೇಟಿಯಾದರು. ಆ ಬಳಿಕ ಟೈಟಲ್ ಟೀಸರ್ ಮಾಡಿಕೊಂಡು ಬಂದೆವು. ಆ ಬಳಿಕ ನಿರ್ಮಾಪಕರು ಇಷ್ಟ್ಟಪಟ್ಟರು. ಚಿತ್ರದ ಪ್ರತಿ ಹಂತದಲ್ಲಿ ನಿಶಾಂತ್ ಸರ್ ಸಹಕಾರ ಕೊಟ್ಟಿದ್ದಾರೆ’ ಎಂದು ಹೇಳಿದರು.  

ವೇದಿಕೆಯಲ್ಲಿ ಚಿತ್ರದ ನಾಯಕ ರಿತ್ವಿಕ್, ನಾಯಕಿ ಚೈತ್ರಾ ಆಚಾರ್ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಚಿತ್ರದ ಟೈಟಲ್ ಟೀಸರ್ ಗುನಾಧ್ಯ ಪ್ರೊಡಕ್ಷನ್ಸ್‌ ಯೂಟ್ಯೂಬ್ ಚಾನೆಲ್ ಬಿಡುಗಡೆಯಾಗಿದ್ದು, ಟೀಸರ್ ಪ್ರಾಮಿಸಿಂಗ್ ಆಗಿದೆ. ಕರಾವಳಿ ಭಾಗದ ಹುಲಿವೇಷದ ಹಿನ್ನೆಲೆ ಹಾಗೂ ಹುಲಿವೇಷ ಸಂಸ್ಕೃತಿಯ ಎಳೆ ಚಿತ್ರದಲ್ಲಿ ಇರಲಿದೆ. ಚೆಂದದ ಲವ್ ಸ್ಟೋರಿ ಜೊತೆಗೆ ಆಕ್ಷನ್, ಎಮೋಷನ್, ಕಾಮಿಡಿ ಮಿಶ್ರಣದ ‘ಮಾರ್ನಮಿ’ ಸಿನಿಮಾಗೆ ಗುನಾಧ್ಯ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಶಿಲ್ಪಾ ನಿಶಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಅಕ್ಟೋಬರ್ ಒಂದರಿಂದ ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ. ಚಿತ್ರದ ತಾರಾಗಣದಲ್ಲಿ ಪ್ರಕಾಶ್ ತುಮಿನಾಡು, ಸೋನು ಗೌಡ, ಜ್ಯೋತೀಶ್ ಶೆಟ್ಟಿ, ರೋಚಿತ್, ಯಶ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರ ಶೆಟ್ಟಿ ಮುಂತಾದವರು ಇರಲಿದ್ದಾರೆ. ಚಿತ್ರಕ್ಕೆ ಶಿವಸೇನ ಛಾಯಾಗ್ರಹಣವಿದೆ.