ದೆಹಲಿಯಲ್ಲಿ ಶೀಘ್ರದಲ್ಲೇ 'ಪ್ಲಾಸ್ಮಾ ಬ್ಯಾಂಕ್' ಆರಂಭ; ದಾನಿಗಳಿಗೆ ಪ್ಲಾಸ್ಮಾ ನೀಡುವಂತೆ ಕೇಜ್ರೀವಾಲ್ ಮನವಿ
ನವದೆಹಲಿ, ಜೂ 29:ದೆಹಲಿಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗೆ ಶೀಘ್ರದಲ್ಲೇ 'ಪ್ಲಾಸ್ಮಾ ಬ್ಯಾಂಕ್' ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಹೇಳಿದ್ದಾರೆ.ಕೋವಿಡ್-19 ಪರಿಸ್ಥಿತಿ ಕುರಿತ ಡಿಜಿಟಲ್ ಸುದ್ದಿಗೋಷ್ಠಿ, ಮುಂದಿನ ಎರಡು ದಿನಗಳಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗುವುದು. ಈ ಮೂಲಕ ತಾವು ಎಲ್ಲಾ ಗುಣಮುಖರಾದ ರೋಗಿಗಳಿಗೆ ತಮ್ಮ ಪ್ಲಾಸ್ಮಾ ನೀಡಬೇಕು ಎಂದು ಮನವಿ ಮಾಡುತ್ತಿದ್ದೇವೆ. ದಾನಿಗಳಿಗೆ ಸೂಕ್ತ ಹಣ ನೀಡಲಾಗುವುದು ಎಂದಿದ್ದಾರೆ.
ಬೇರೆಯವರ ಜೀವ ಉಳಿಸುವ ಅವಕಾಶ ಸಿಗುವುದು ಬಹಳ ಅಪರೂಪ. ಆದ್ದರಿಂದ ಎಲ್ಲಾ ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ತಮ್ಮ ಪ್ಲಾಸ್ಮಾ ದಾನ ಮಾಡುವಂತೆ ಮನವಿ ಮಾಡುತ್ತಿದ್ದೇವೆ. ಇದು ನಿಜವಾದ ದೇವರ ಸೇವೆಯಂತೆ ಎಂದಿದ್ದಾರೆ. ಈಗಾಗಲೇ ಸರ್ಕಾರ 29 ರೋಗಿಗಳ ಮೇಲೆ ಈ ಪ್ರಯೋಗ ನಡೆಸಿದ್ದು, ಫಲಿತಾಂಶಗಳು ಉತ್ತೇಜನಕಾರಿಯಾಗಿದೆ ಎಂದರು. ದಕ್ಷಿಣ ದೆಹಲಿಯ ಲಿವರ್ ಮತ್ತು ಬೈಲಿಯರಿ ವಿಜ್ಞಾನಿಗಳ ಸಂಸ್ಥೆ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲಾಗುವುದು. ಪ್ಲಾಸ್ಮಾ ಅಗತ್ಯವುಳ್ಳವರು ವೈದ್ಯರ ಶಿಫಾರಸು ಪತ್ರ ಪಡೆಯಬೇಕು ಎಂದರು. ಪ್ಲಾಸ್ಮಾ ದಾನ ಮಾಡುವುದರಲ್ಲಿ ಯಾವುದೇ ಅಪಾಯವಿಲ್ಲ. ದಾನಿಗಳಿಗೆ ಸೂಕ್ತ ಹಣದ ನೆರವು ನೀಡಲಾಗುವುದು. ಕೆಲವೇ ದಿನಗಳಲ್ಲಿ ಈ ವ್ಯವಸ್ಥೆಯ ದೂರವಾಣಿ ಸಂಖ್ಯೆ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 