'ಜನಸಂಖ್ಯೆ ಹೆಚ್ಚಳ ಜಗತ್ತಿನ ತುತರ್ು ಸಮಸ್ಯೆ'
ಕೋಲ್ಕತಾ: ಹೆಚ್ಚುತ್ತಿರುವ ಜನಸಂಖ್ಯೆಯು ವಿಶ್ವದ ಪ್ರಮುಖ ಸಮಸ್ಯೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವ ಜನಸಂಖ್ಯಾ ದಿನದಂದು ಈ ಕುರಿತು ಟ್ವೀಟ್ ಮಾಡಿರುವ ಅವರು ಇದು ನಿಜಕ್ಕೂ ಪ್ರಪಂಚ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಮತಾ ಬ್ಯಾನಜರ್ಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಪೋಸ್ಟ್ ಮಾಡಿ, ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಜನಸಂಖ್ಯಾ ಸ್ಫೋಟ ತುತರ್ು ಸಮಸ್ಯೆಯಾಗಿದ್ದು ಈ ನಿಟ್ಟಿನಲ್ಲಿ ಸಮಸ್ಯೆ ನಿವಾರಣೆಗೆ ಗಮನವನ್ನು ಕೇಂದ್ರೀಕರಿಸಲು ಈ ದಿನಾಚರಣೆ ಪ್ರಯತ್ನಿಸುತ್ತದೆ. ಜನಸಂಖ್ಯೆಯ ಸಮಸ್ಯೆಗಳ ನಿವಾರಣೆಯ ಪ್ರಾಮುಖ್ಯತೆಯನ್ನು ಅರಿತು ವಿಶ್ವಸಂಸ್ಥೆ ಮೊದಲಿಗೆ ಜುಲೈ 11, 1987 ರಂದು ಈ ದಿನ ಆಚರಿಸಿತು.
1994 ರ ಜನಸಂಖ್ಯೆ ಮತ್ತು ಅಭಿವೃದ್ಧಿಯ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡನೆಯಾದ ಇನ್ನೂ ಪರಿಹಾರವಾಗದ ಗುರಿಗಳ ಈಡೇರಿಕೆ ಈ ಬಾರಿಯ ಜನಸಂಖ್ಯಾ ದಿನ ಕರೆ ನೀಡಿದೆ. ವಿಶ್ವ ಜನಸಂಖ್ಯಾ ದಿನವನ್ನು ವಿವಿಧ ದೇಶಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 