ಬೆಳಗಾವಿ: 'ಸ್ವಾತಂತ್ರ್ಯದ ಸದ್ಭಳಕೆಯ ಮೂಲಕ ಭವಿಷ್ಯ ರೂಪಿಸಿಕೊಳ್ಳಿ '
ಲೋಕದರ್ಶನ ವರದಿ
ಬೆಳಗಾವಿ 16: "ಈ ಸ್ವಾತಂತ್ರ್ಯ ನಮಗೆ ಅನೇಕ ಮಹನೀಯರ ತ್ಯಾಗ, ಬಲಿದಾನಗಳ ಕೊಡುಗೆ, ಈ ಸ್ವಾತಂತ್ರ್ಯವನ್ನು ಸರಳತೆಯ ದೃಷ್ಟಿಯಿಂದ ಬಳಸಿಕೊಂಡು ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ನಿವೃತ್ತ ವಾಯುಸೇನಾ ಅಧಿಕಾರಿ ಬಸವರಾಜ ವನ್ನೂರ ಅವರು ಹೇಳಿದರು.
ಅವರು ಸ್ಥಳೀಯ ಎಸ್ ಜಿ ವಿ ಮಹೇಶ ಪದವಿ ಪೂರ್ವ ಕಾಲೇಜು, ಬೆಳಗಾವಿಯಲ್ಲಿ ದ್ವಜಾರೋಹಣ ಕಾರ್ಯವನ್ನು ನೆರವೇರಿಸಿ ಮಾತನಾಡುತ್ತಿದ್ದರು. "ಸ್ವೇಚ್ಛೆಯಾಗದೆ ನಿಮ್ಮನ್ನು ಅರಿತು ಗುಣಾತ್ಮಕತೆ ಬೆಳೆಸಿಕೊಳ್ಳಿ, ಆ ಮೂಲಕ ದೇಶದ ಕೀತರ್ಿಯನ್ನು ಹೆಚ್ಚಿಸಿ" ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಂ ವಿ ಭಟ್ಟ ಮಾತನಾಡಿ " ಭಾರತವನ್ನು ವಿಶ್ವಗುರು ಎಂದು ಕರೆಯುವುದು ಇಲ್ಲಿನ ಸಂಸ್ಕೃತಿಯ ಶ್ರೇಷ್ಠತೆಯ ಆಧಾರದ ಮೇಲೆ, ಆದರೆ ನಮ್ಮಲ್ಲಿ ಸಾಮೂಹಿಕ ಸಂಘಟನೆಯ ಕೊರತೆಯಿದೆ, ಅದನ್ನು ಸರಿದೂಗಿಸುವ ಹೊಣೆಗಾರಿಕೆ ನಮ್ಮ ಮೇಲಿದೆ " ಎಂದರು. ವೇದಿಕೆಯ ಮೇಲೆ ನಾಗರಿಕ ವಿಕಾಸ ವೇದಿಕೆಯ ಅಧ್ಯಕ್ಷ ಎಲ್ ಎಸ್ ಪಾಟೀಲ್, ಉಪಪ್ರಾಚಾರ್ಯರಾದ ಆನಂದ ಖೋತ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಕುಂದ ಗೋಖಲೆ ಸ್ವಾಗತಿಸಿದರು. ಉಪನ್ಯಾಸಕಿ ಕೃತಿಕಾ ಶೆಟ್ಟಿ ವಂದನಾರ್ಪಣೆ ಮಾಡಿದರು. ಅಭಿಷೇಕ ಕುಂಬಾರ ಮತ್ತು ಐಶ್ವರ್ಯ ಅಡವಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾಥರ್ಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 