ಸಾಹಿತಿ ಕಿರಣ ಗಣಾಚಾರಿಗೆ ‘ಶಿಭಾ ಕಾವ್ಯ ಪುರಸ್ಕಾರ’
'Shibha Poetry Award' for writer Kiran Ganachari
ಬೆಳಗಾವಿ 03 : ಸಾಹಿತಿಗಳಾದ ಕಿರಣ ಕ .ಗಣಾಚಾರಿ ಅವರ ’ಬೆಳಕಿನ ಹೊಳೆಯ ಪ್ರವಾಹ’ ಕೃತಿಗೆ ಸಾಹಿತ್ಯ ಸೌರಭ ಪೌಂಡೇಶನ್ ಕೊಡಮಾಡುವ 2025 ನೇ ಸಾಲಿನ "ಶಿಭಾ ಕಾವ್ಯ ಪುರಸ್ಕಾರ" ದೊರೆತಿದೆ ಎಂದು ಅಧ್ಯಕ್ಷ ಶಿವಾನಂದ ಭಾಗಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗೂ ಪುಸ್ತಕಗಳನ್ನು ಒಳಗೊಂಡಿದ್ದು, ಮೆ 1 ರಂದು ಬೆಳಗಾವಿಯ ಕನ್ನಡ ಭವನದಲ್ಲಿ ನಡೆಯುವ ಪೌಂಡೇಶನ್ ನ 2 ನೇ ವರ್ಷದ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಕಿರಣ ಗಣಾಚಾರಿ ಅವರು ಮೂಲತ: ಖಾನಾಪೂರ ತಾಲೂಕಿನ ಇಟಗಿ ಗ್ರಾಮದವರಾಗಿದ್ದು ಕಲ್ಪನಾ ಛಾಯೆಯಲಿ, ಕಿರು ನಗೆ, ಬೆಳಕಿನ ಹೊಳೆಯ ಪ್ರವಾಹ ಎಂಬ ಪುಸ್ತಕಗಳನ್ನು ಪ್ರಕಟಿಸಿರುತ್ತಾರೆ. ಶ್ರೀಯುತರು ’ಸುವರ್ಣ ಕರ್ನಾಟಕ ಕಣ್ಮಣಿ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದು ಕಥೆ, ಅಂಕಣ ಬರಹ,ವಿಮರ್ಶಾ ಲೇಖನಗಳು, ಕವನ, ಚುಟುಕು -ಹನಿಗವನಗಳು,ಆಧುನಿಕ ವಚನಗಳು ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿಯಲ್ಲಿ ತೊಡಗಿರುತ್ತಾರೆ. ಮೈಸೂರು ದಸರಾ ಕವಿಗೋಷ್ಠಿಯನ್ನೊಳಗೊಂಡು ಹಲವಾರು ರಾಜ್ಯಮಟ್ಟದ ಗೋಷ್ಠಿಗಳಲ್ಲಿ ಭಾಗವಹಿಸುತ್ತಿದ್ದು ಆಕಾಶವಾಣಿ ಧಾರವಾಡ ಹಾಗೂ ನಮ್ಮೂರ ಬಾನುಲಿ ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ನೀಡಿರುತ್ತಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 