‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ’
'Shri Nalvadi Krishnaraja Wodeyar's contribution to the development of the Mysore State was immense'
ಲೋಕದರ್ಶನ ವರದಿ
ಯರಗಟ್ಟಿ 04: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಳಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಅವರು ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಿಸಿದರು. ನಂತರ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಶಿಕ್ಷಣ, ನೀರಾವರಿ, ಕೈಗಾರಿಕೆ ಸೇರಿದಂತೆ ನಾಡಿನ ಸವಾಂರ್ಗ
ಅಭಿವೃದ್ಧಿಗೆ ಅವರು ಭದ್ರ ಬುನಾದಿ ಹಾಕಿಕೊಟ್ಟ ಮಹಾನ್ ಆಡಳಿತಗಾರರಾಗಿದ್ದರು ಎಂದು ಸ್ಮರಿಸಿದರು. ಈ ಸಂದರ್ಭದಲ್ಲಿ ಪ.ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಉಪತಹಶೀಲ್ದಾರ ಸಂತೋಷ ಜಾದವ, ಶಿರಸ್ಥದಾರ ಎಸ್. ಬಿ. ಕುಲಕರ್ಣಿ, ಗ್ರಾಮ ಆಡಳಿತಾಧಿಕಾರಿ ದಾನೇಶ್ವರಿ ಮಠ, ಸ್ವರೂಪ ಚಪಳಿ, ಶಾಹೀನ್ ಮಿಶ್ರಕೊಟಿ, ಎಲ್. ಸಿ. ತಳವಾರ, ಕೆ. ಎಂ. ಗಡಕರಿ, ಲಖನ ಪೂಜೇರಿ, ಸಂತೋಷ ಭರಡಿ, ರವಿ ತಳವಾರ, ಮಂಜುನಾತ ಬಡಿಗೇರಿ, ವಿಜಯ ಉಪ್ಪಿನ ಸೇರಿದಂತೆ ಅನೇಕರು ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 