ಆ. 2ರಂದು ಸಂಗೀತ ಗಂಗಾ ಪ್ರಶಸ್ತಿ ಪುರಸ್ಕೃತೆ ಡಿ.ಎಸ್. ಜಾನಕಿ ಅವರಿಗೆ ಸ್ವರನಮನ
'Svaranamana' (Musical Tribute) for 'Sangeeta Ganga' awardee D.S. Janaki on August 2
ಲೋಕದರ್ಶನ ವರದಿ
ಗದಗ 31: ಸಂಗೀತ ಗಂಗಾ ಪ್ರಶಸ್ತಿ ಪುರಸ್ಕೃತೆ ಡಿ.ಎಸ್. ಜಾನಕಿ ಅವರಿಗೆ ಸ್ವರನಮನ ಕಾರ್ಯಕ್ರಮವನ್ನು ಆಗಸ್ಟ್ 2ರಂದು (ಭಾನುವಾರ) ಸಂಜೆ 5.30ಕ್ಕೆ ಗದಗದ ಜಿಲ್ಲಾ ಕ್ರೀಡಾಂಗಣದ ಸಮೀಪದ ಸಂಕೇತ ಸಂಕೀರ್ಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶಂಕರಾನಂದ ಮಹಾಸ್ವಾಮಿಗಳು (ಮುಕ್ಕಣ್ಣೇಶ್ವರ ಮಠ) ವಹಿಸಲಿದ್ದು, ನಿವೃತ್ತ ಉಪನಿರ್ದೇಶಕ ಐ.ಬಿ. ಬೆನಕೊಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿ.ವಿ. ನಡುವಿನಮನಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಗೀತಾಂಜಲಿ ಗೌಡರ್ ಹಾಗೂ ಸರ್ಕಾರಿ ಪ್ರೌಢಶಾಲೆ ಎಸ್.ಎಂ. ಕೃಷ್ಣನಗರದ ಶಿಕ್ಷಕರು ಭಾಗವಹಿಸಲಿದ್ದಾರೆ.
ಸಂಗೀತ ಕಾರ್ಯಕ್ರಮದಲ್ಲಿ ಶ್ರೀನಿವಾಸ ಕುಲಕರ್ಣಿ, ಶಿಲ್ಪಾ ಕುರಹಟ್ಟಿ, ಸಂಗಮೇಶ್ವರ ಪಾಟೀಲ ಹಾಗೂ ರಾಹುಲ್ ರಾಠೋಡ್ ಅವರು ಸಂಗೀತ ನಮನ ಸಲ್ಲಿಸಲಿದ್ದಾರೆ. ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಆಯೋಜಕರ ಪರವಾಗಿ ವೈ.ಆರ್. ಹಿರೇಗೌಡರ್ ಮನವಿ ಮಾಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 