ಜ್ಞಾನ ಶಕ್ತಿ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ
'World No Tobacco Day' celebrated at Gyan Shakti Campus
ವಿಜಯಪುರ, 02 : ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನ ಶಕ್ತಿ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ದ ಅಂಗವಾಗಿ ಶಿಕ್ಷಣ ಅಧ್ಯಯನ ವಿಭಾಗ, ಎನ್.ಎಸ್.ಎಸ್. ಸ್ವಯಂ ಸೇವಕಿಯರು ಮಾನವ ಸರಪಳಿ ನಿರ್ಮಿಸುವ ಮೂಲಕ ವಿವಿಯ ಆವರಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಚಾಲನೆ ನೀಡಿದರು.
ತಂಬಾಕನಿಂದ ಆಗುವ ವಿವಿಧ ಅನಾಹುತಗಳ ಬಗ್ಗೆ ಅರಿವು ಮೂಡಿಸಲು ಕರಪತ್ರಗಳನ್ನು ಹಂಚಿದರು. ವಿಶ್ವವಿದ್ಯಾನಿಲಯದ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿ ತಂಬಾಕು ಮುಕ್ತ ದೇಶವಾಗಿಸಲು ಎಲ್ಲರೂ ಶ್ರಮ ಪಡಬೇಕು ಎಂದು ಪ್ರಚಾರ ನಡೆಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್.ಚಂದ್ರಶೇಖರ, ಎನ್.ಎಸ್.ಎಸ್ ಸಂಯೋಜಕ ಪ್ರೊ.ಅಶೋಕ ಸುರಪುರ, ಶಿಕ್ಷಣ ಅಧ್ಯಯನ ವಿಭಾಗದ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ವಿಷ್ಣು ಶಿಂಧೆ, ಡಾ.ಗುಲಾಬ್ ರಾಠೋಡ್, ಡಾ.ಪ್ರಜಾಪತಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 