’ಅಶೋಕ ವೃಕ್ಷ’ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ
'Ashoka Vriksha' congratulatory book release program
ವಿಜಯಪುರ 23. ತಾಳಿಕೋಟಿ ತಾಲೂಕಿನ ಮಿಣಜಗಿ ಗ್ರಾಮದ ಪ್ರೊ ಎ. ಬಿ ಪಾಟೀಲ ಅವರು ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿ, ಕೃಷಿ ವಿಸ್ತರಣಾ ನಿರ್ದೇಶಕರಾಗಿ, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ, ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿ, ನಿವೃತ್ತಿ ನಂತರ ಕೃಷಿ ಸಚಿವರಾಗಿದ್ದ ಶಿವಶಂಕರ ರೆಡ್ಡಿ, ಬಿ.ಸಿ.ಪಾಟೀಲ, ಲಕ್ಷ್ಮಣ ಸವದಿ ಹಾಗೂ ಹಾಲಿ ಸಚಿವ ಚೆಲುರಾಯಸ್ವಾಮಿ ಸೇರಿದಂತೆ ಐವರು ಕೃಷಿ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿ, ಕೃಷಿ ಸಲಹೆಗಾರರಾಗಿ, ಕರ್ನಾಟಕದಲ್ಲಿ ರೈತ ಮಿತ್ರರಾಗಿ, ಜನಾನುರಾಗಿ ಆಗಿರುವ ಪ್ರೊ. ಎ. ಬಿ. ಪಾಟೀಲ ಅವರು 70 ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿಗಳು ’ಅಶೋಕ ವೃಕ್ಷ’ ಅಭಿನಂದನಾ ಗ್ರಂಥ ಬಿಡುಗಡೆಯನ್ನು ದಿ.26 ಶುಕ್ರವಾರ ಬೆ.10 ಗಂ. ಬೆಂಗಳೂರಿನ ಜೆ.ಸಿ. ರಸ್ತೆಯ, ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಹಮ್ಮಿಕೊಂಡಿದ್ದಾರೆ.
ಈ ಕಾರ್ಯಕ್ರಮ ಉದ್ಘಾಟನೆಯನ್ನು ಕೆಂಗರಿಯ ಒಕ್ಕಲಿಗರ ಮಹಾಸಂಸ್ಥಾನಮಠದ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಜಿ ಉದ್ಘಾಟನೆ ಮಾಡಲಿದ್ದು, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅಭಿನಂದನಾ ಗ್ರಂಥವನ್ನು ಬಿಡುಗಡೆಗೊಳಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎಲ್.ಎನ್ ಮುಂಕುಂದರಾಜ ಪುಸ್ತಕ ಕುರಿತು ಮಾತನಾಡುವರು. ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಎನ್.ಎಸ್.ಶಿವಶಂಕರ ರೆಡ್ಡಿ, ಬಿ.ಸಿ.ಪಾಟೀಲ, ಕೃಷಿ ಇಲಾಖೆ ಆಯುಕ್ತ ವಾಯ್ ಎಸ್. ಪಾಟೀಲ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಕೃಷಿ ಬೆಲೆ ಆಯೋಗ ಅಧ್ಯಕ್ಷ ಅಶೋಕ ದಳವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ. ಎ.ಬಿ.ಪಾಟೀಲ ಅವರ ವಿದ್ಯಾರ್ಥಿಗಳು, ಆಸಕ್ತ ರೈತರು, ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟನಾ ಸಮಿತಿಯ ಸಾತ್ವೀರ ರೊಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧನ್ಯವಾದಗಳು, ಡಾ.ಮಹಾಂತೇಶ ಬಿರಾದಾರ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 