ಯಡೂರು ಸಂಸ್ಕೃತ ಪಾಠಶಾಲೆಗೆ ಅತ್ಯುತ್ತಮ ಪ್ರಶಸ್ತಿ
'Best Award' for Yadooru Sanskrit Pathashala
ಮಾಂಜರಿ 02: ಶ್ರೀಶೈಲ ಪೀಠದ ಜಗದ್ಗುರುಗಳಾದ ಹಾಗೂ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ವೀರಭದ್ರ ದೇವಸ್ಥಾನ ಮತ್ತು ಕಾಡಸಿದ್ದೇಶ್ವರ ಸಂಸ್ಥಾನ ಮಠದ ಧರ್ಮಾಧಿಕಾರಿಗಳಾದ ಡಾ ಚನ್ನ ಸಿದ್ದರಾಮ ಪಂಡಿತರಾದ ಶಿವಾಚಾರ್ಯ ಮಹಾಸ್ವಾಮಿಜಿಗಳ ಮಾರ್ಗದರ್ಶನದಲ್ಲಿ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆಯುತ್ತಿರುವ ಪರಮಪೂಜ್ಯ ಸಿದ್ದಲಿಂಗ ಶಿವಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲೆಯ ಸಂಸ್ಕೃತ ಭಾಷಾ ಸೇವೆ ಪರಿಗಣಿಸಿ ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದಿಂದ ಬೆಳಗಾವಿ ವಿಭಾಗದ 'ಅತ್ಯುತ್ತಮ ಸಂಸ್ಕೃತ ಪಾಠ ಶಾಲೆ' ಪ್ರಶಸ್ತಿ ನೀಡಿದೆ. ಗೌರವಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸ್ನಾತಕಪೂರ್ವ ದೀಕ್ಷಾಂತ ಸಮಾರೋಹದಲ್ಲಿ ಶಾಲೆ ಪರವಾಗಿ ಸಂಸ್ಕೃತ ವೇದ ಆಗಮ್ ಪಾಠ ಶಾಲೆಗಳ ಮುಖ್ಯ ಗುರುಗಳಾದ ಶ್ರೀಶೈಲ್ ಹಿರೇಮಠ ಗುರೂಜಿಗಳು ಸದರಿ ಪ್ರಶಸ್ತಿ ಸ್ವೀಕರಿಸಿದರು ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ಅಹಲ್ಯಾ ಪ್ರಶಸ್ತಿ ಪ್ರದಾನ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 