‘ಟಾಸ್ ಹಾರಿಸಿದವರು cm ಮತ್ತು dcm’
'CM and DCM threw the toss'
ಬೆಳಗಾವಿ: ಕ್ಯಾಪ್ಟನ್ಗಾಗಿ ಟಾಸ್ ಹಾರಿಸಿದವರು ಅವರಿಬ್ಬರೇ, ಹೆಡ್ ಬಿದ್ದಿದೇಯೋ ಟೆಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಸಿಎಂ ಕುರ್ಚಿ ಕಿತ್ತಾಟದ ಕುರಿತು ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ ''ಕ್ಯಾಪ್ಟನ್ ಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರು ಸೇರಿ ಟಾಸ್ ಮಾಡಿದ್ದಾರೆ. ಹೈ ಕಮಾಂಡ್ ಅವರಿಗೆ ಏನು ಹೇಳಿದೆ ಎಂದು ಅವರನ್ನೇ ಕೇಳಬೇಕು. ಟಾಸ್ ದೆಹಲಿಯ ಫಿರೋಜ್ ಶಾ ಕೊಟ್ಲಾದ ಮೈದಾನದಲ್ಲಿ ಆಗಿದೆ.ಟಾಸ್ ಮಾಡಿದವರು ಅವರಿಬ್ಬರು, ಹೀಗಿರುವಾಗ ಕ್ಯಾಪ್ಟನ್ ಬದಲಾವಣೆ ಹಾಗೂ ಹಳೇ ಕ್ಯಾಪ್ಟನ್ ಮುಂದುವರೆಯುವ ಕುರಿತು ಅವರನ್ನೇ ಕೇಳಬೇಕು'' ಎಂದರು.
''ಸದ್ಯ ನಾವು ಕ್ಯಾಪ್ಟನ್ ಜಾಗದಲ್ಲಿ ಇಲ್ಲ. ಮತ್ತೆ ಅವರಿಬ್ಬರೂ ಕ್ಯಾಪ್ಟನ್ ಗಾಗಿ ಟಾಸ್ ಮಾಡುವಾಗ ಥರ್ಡ್ ಅಂಪೈರ್ ಇರಲಿಲ್ಲ. ಇಬ್ಬರೇ ಟಾಸ್ ಹಾರಿಸಿದವರು, ಈ ಟಾಸ್ ವಿಚಾರ ಅವರಿಬ್ಬರಿಗೆ ಗೊತ್ತು, ಅವರನ್ನೇ ಕೇಳಬೇಕು'' ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 