‘ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲು ಪ್ರೇರಿಪಿಸಬೇಕು’
'Children should be encouraged to engage in extracurricular activities'
ರಾಯಬಾಗ 28: ಪಾಲಕರು ತಮ್ಮ ಮಕ್ಕಳನ್ನು ಮೊಬೈಲ್ಗಳಿಂದ ದೂರವಿಟ್ಟು, ಅವರಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲು ಪ್ರೇರಿಪಿಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಭಾನುವಾರ ಪಟ್ಟಣದ ಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಮಹಾವೀರ ವಸತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೋಧಕರು ವಿದ್ಯಾರ್ಥಿಗಳಿಗೆ ಒಳ್ಳೆ ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ನೀಡಬೇಕೆಂದರು.
ಸಂಸ್ಥೆ ಅಧ್ಯಕ್ಷ ಡಿ.ಎಮ್.ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ವಿನೋದ ದೊಡ್ಡನವರ, ಉಪನ್ಯಾಸಕ ಶೀತಲ ಅಸ್ಕಿ, ಅರಿಹಂತ ಚಾರಿಟೇಬಲ್ ಅಧ್ಯಕ್ಷ ಡಿ.ಸಿ.ಸದಲಗಿ, ಪ್ರಾಚಾರ್ಯ ಆಶಾರಾಣಿ ಪಟ್ಟನಕೊಡಿ, ಡಿವಾಯ್ಎಸ್ಪಿ ಬಿ.ಎಸ್.ಮಂಟೂರ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಡಾ.ಅಜೀತ ನಾಯಿಕ, ಸತ್ಯಕುಮಾರ ಬಿರಾಜ, ಶೀತಲ ಬೇಡಕಿಹಾಳೆ, ಡಿ.ಎಚ್.ಯಲ್ಲಟ್ಟಿ ಸೇರಿ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 