ಇಂದು ‘ಮೊಬೈಲ್ ಮಾವ’ ನಗೆ ನಾಟಕ ಪ್ರದರ್ಶನ
'Mobile Maava' comedy show today
ಇಂದು ‘ಮೊಬೈಲ್ ಮಾವ’ ನಗೆ ನಾಟಕ ಪ್ರದರ್ಶನ
ಧಾರವಾಡ .12: ನಗರದ ‘ಸೃಜನಾ’ ಡಾ. ಅಣ್ಣಾಜಿರಾವ ಸಿರೂರ ರಂಗಮಂದಿರದಲ್ಲಿ ಇಂದು (13ನೇ ಜನೆವರಿ, 2025 ಸೋಮವಾರ) ಆಯೋಜಿಸಿರುವ, ಆಕಾಶವಾಣಿ ಧಾರವಾಡ ಕೇಂದ್ರದ ಅಮೃತ ಮಹೋತ್ಸವದ ಪ್ರಧಾನ ವೇದಿಕೆ ಕಾರ್ಯಕ್ರಮದಲ್ಲಿ, ಸಂಜೆ 7.30ರ ಬಳಿಕ, ಹಾಸ್ಯ ನಾಟಕ ರಂಗದ ಮೇಲೆ ಪ್ರಸ್ತುತ ಪಡಿಸಲಾಗುತ್ತಿದೆ.
ಹುಬ್ಬಳ್ಳಿಯ ಡಾ.ಗೋವಿಂದ ಮಣ್ಣೂರ ರಚಿಸಿದ ನಗೆ ನಾಟಕ ‘ಮೊಬೈಲ್ ಮಾವ’ ಆಕಾಶವಾಣಿಯ ಹಿರಿಯ ಉದ್ಘೋಷಕಿ ಸುರೇಖಾ ಸುರೇಶ ನಿರ್ದೇಶನದಲ್ಲಿ, ಪ್ರದರ್ಶನಗೊಳ್ಳಲಿದೆ.
ಆಕಾಶವಾಣಿಯ ಉನ್ನತ ಶ್ರೇಣಿ ನಾಟಕ ಕಲಾವಿದರಾದ ಡಾ.ಚೇತನ್ ನಾಯಕ, ಡಾ.ಶಶಿಧರ ನರೇಂದ್ರ, ರವಿ ಕುಲಕರ್ಣಿ, ಅನಂತ ದೇಶಪಾಂಡೆ, ವೀರಣ್ಣ ಪತ್ತಾರ, ನವೀನ ಮಹಾಲೆ, ಆರತಿ ದೇವಶಿಖಾಮಣಿ ಹಾಗೂ ಸನ್ಮತಿ ಅಂಗಡಿ ವಿವಿಧ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.
ರವಿ ರಸಾಳಕರ ನಾಟಕಕ್ಕೆ ಸಂಗೀತ ಸಂಯೋಜಿಸಲಿದ್ದು, ಸಂತೋಷ ಗಜಾನನ ಮಹಾಲೆ ಪ್ರಸಾದನ ಹಾಗೂ ಬೆಳಕಿನ ವ್ಯವಸ್ಥೆ ವಿಜಯೀಂದ್ರ ಅರ್ಚಕ್ ನಿರ್ವಹಿಸಲಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 