‘ಹಳೆ ತಲೆಮಾರಿನವರು ನಿವೃತ್ತಿಯಾಗಿ ಹೊಸಬರು ಅಧಿಕಾರ ವಹಿಸಿಕೊಳ್ಳಲ್ಲಿ’
'The older generation will retire and new ones will take over'
ನಾಗ್ಪುರ: ‘ಹೊಸ ಪೀಳಿಗೆಯವರು ಅಧಿಕಾರ ವಹಿಸಿಕೊಳ್ಳಬೇಕು. ಎಲ್ಲವೂ ಸುಗಮವಾಗಿ ಸಾಗುವ ಹಂತದಲ್ಲಿ ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು’ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ವಿದರ್ಭ–ಖಸ್ಡರ್ ಔದ್ಯೋಕ್ ಮಹೋತ್ಸವ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ಹಂತ ಹಂತವಾಗಿ ತಲೆಮಾರುಗಳು ಬದಲಾಗಬೇಕು. ನಾವೂ ನಿವೃತ್ತಿ ಪಡೆದು, ಹೊಸ ತಲೆಮಾರಿಗೆ ಜಾಗ ಮಾಡಿಕೊಡಬೇಕು. ಎಲ್ಲವೂ ಸುಗಮವಾಗಿ ಸಾಗುವ ಹಂತದಲ್ಲಿ ನಾವು ಅಲ್ಲಿಂದ ಹೊರಬಂದು, ಹೊಸತೇನಾದರೂ ಮಾಡಬೇಕು’ ಎಂದು ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.
ಫೆ. 6ರಿಂದ 8ರವರೆಗೆ ನಡೆಯಲಿರುವ ವಿದರ್ಭ ಎಕ್ಸ್ಪೊಗೆ ಸಂಬಂಧಿಸಿದಂತೆ ಗಡ್ಕರಿ ಮಾತನಾಡಿದ್ದಾರೆ. ಇದನ್ನು ಆಯೋಜಿಸುತ್ತಿರುವ ಕೈಗಾರಿಕಾ ಅಭಿವೃದ್ಧಿ ಒಕ್ಕೂಟ(AID)ದ
ಮುಖ್ಯ ಮಾರ್ಗದರ್ಶಕರಾಗಿ ಗಡ್ಕರಿ ಕೆಲಸ ಮಾಡುತ್ತಿದ್ದಾರೆ.
‘ವಿದರ್ಭ ಪ್ರಾಂತ್ಯದಲ್ಲಿ ಬಹಳಷ್ಟು ಉತ್ತಮ ಕೈಗಾರಿಕೋದ್ಯಮಿಗಳು ಇದ್ದಾರೆ. ಈ ಮೂರು ದಿನಗಳ ಮೇಳದಲ್ಲಿ ವಿದರ್ಭವನ್ನು ದೇಶದ ಪ್ರಮುಖ ಕೈಗಾರಿಕಾ ಕ್ಷೇತ್ರವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಕೃಷಿ ಆಧಾರಿತ ಕೈಗಾರಿಕೆಗಳು ಮತ್ತು ಸೇವಾ ವಲಯದ ಉದ್ಯಮಗಳು ಯಾವುದೇ ಪ್ರಾಂತ್ಯದ ಅಭಿವೃದ್ಧಿಗೆ ಪೂರಕ ಕ್ಷೇತ್ರಗಳು’ ಎಂದು ಗಡ್ಕರಿ ಹೇಳಿದ್ದಾರೆ.
ವಿದರ್ಭ ಎಕ್ಸ್ಪೊನಲ್ಲಿ ಜವಳಿ, ಪ್ಲಾಸ್ಟಿಕ್, ಖನಿಜ, ಕಲ್ಲಿದ್ದಲ್ಲು, ವಿಮಾನಯಾನ, ಸರಕು ಸಾಗಣೆ, ಐಟಿ, ಆರೋಗ್ಯ ಕ್ಷೇತ್ರ, ಔಷಧ ಕ್ಷೇತ್ರ, ರಕ್ಷಣೆ, ರಿಯಲ್ ಎಸ್ಟೇಟ್, ನವೀಕರಣ ಇಂಧನ ಮತ್ತು ಸ್ಟಾರ್ಟ್ಅಪ್ಗಳು ಸೇರಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 