ಸರ್ದಾರ್ ವಲ್ಲಭಭಾಯ್ ಪಟೇಲರ 150ನೇ ಜನ್ಮ ವರ್ಷಾಚರಣೆ ದಿನದ ನಿಮಿತ್ತ ‘ಏಕತಾ ಓಟ’

ಸರ್ದಾರ್ ವಲ್ಲಭಭಾಯ್ ಪಟೇಲರ 150ನೇ ಜನ್ಮ ವರ್ಷಾಚರಣೆ ದಿನದ ನಿಮಿತ್ತ ‘ಏಕತಾ ಓಟ’ 'Unity Run' to mark the 150th birth anniversary of Sardar Vallabhbhai Patel

                           ಹುಬ್ಬಳ್ಳಿ 22:  ದೇಶದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲರ 150ನೇ ಜನ್ಮ ವರ್ಷಾಚರಣೆ ದಿನದ ನಿಮಿತ್ತ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಏಕತೆಗಾಗಿ ‘ಏಕತಾ ಓಟ’ ದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಉತ್ಸಾಹದಿಂದ ಭಾಗವಹಿಸಿದ್ದರು.ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಉಪಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ರಾಮಣ್ಣ ಬಡಿಗೇರ,ಉಮೇಶಗೌಡ ಕೌಜಗೇರಿ, ಪ್ರೊ ಜಯಾನಂದ ಹಟ್ಟಿ, ಪ್ರೊ ಸಂದೀಪ ಭೂದಿಹಾಳ, ,ಸೇರಿದಂತೆ ಹಲವಾರು ಗಣ್ಯರು, ವಿದ್ಯಾರ್ಥಿಗಳು, ಮುಂತಾದವರು ಪಾಲ್ಗೊಂಡಿದ್ದರು.