ಬೈಲಹೊಂಗಲ: ಯುವಕರು ತಂಬಾಕು ಮುಕ್ತ ಸಮಾಜ ಮಾಡಲು ಪಣತೊಡಬೇಕು
ಲೋಕದರ್ಶನ ವರದಿ
ಬೈಲಹೊಂಗಲ 03: ತಂಬಾಕು ಸೇವನೆಯಿಂದ ಗುಣಪಡಿಸಲಾಗದ ಮಾರಕ ರೋಗಗಳು ಉಂಟಾಗುವುದರಿಂದ ಯುವಕರು ತಂಬಾಕು ಸೇವನೆ ತ್ಯಜಿಸಿ ತಂಬಾಕು ಮುಕ್ತ ಸಮಾಜ ಮಾಡಲು ಪಣತೊಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶೆ ಕಾವೇರಿ ಕಲ್ಮಠ ಹೇಳಿದರು.
ಅವರು ಪಟ್ಟಣದಲ್ಲಿ ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಪ್ಯಾನಲ್ ವಕೀಲರು ಇವುರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ತಂಬಾಕು ದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂಬಾಕು ಸೇವನೆ ಅಪಾಯಕಾರಿ ಹಿರಿಯರು ಮಕ್ಕಳಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ನೀಡಬೇಕು ಎಂದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಿದ್ದನ್ನವರ ಅಧ್ಯಕ್ಷತೆ ವಹಿಸಿ ಮಾತನಾಡಿ, ತಂಬಾಕು ಸೇವನೆ ಅಪಾಯಕಾರಿ ಅದರಲ್ಲಿ ಇರುವ ರಾಸಾಯನಿಕ ವಸ್ತುಗಳು ದೇಹದ ಆರೋಗ್ಯದ ಮೇಲೆ ಅನೇಕ ರೀತಿಯ ದುಷ್ಪರಿಣಾಮವನ್ನು ಉಂಟು ಮಾಡುತ್ತವೆ. ತಂಬಾಕು ತ್ಯಜಿಸಿ ರೋಗಮುಕ್ಯರಾಗಬೇಕೆಂದರು.
ವೇದಿಕೆ ಮೇಲೆ ನ್ಯಾಯಾಧೀಶರಾದ ಚೈತ್ರಾ ಎ.ಎಮ್., ಸೌಭಾಗ್ಯ ಭೂಶೇರ, ಮುಖ್ಯ ವೈದ್ಯಾಧಿಕಾರಿ ಡಾ.ಆರ್.ಎಸ್.ಹಿತ್ತಲಮನಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಮ್.ಆರ್.ಮೆಳವಂಕಿ, ಉಪಾಧ್ಯಕ್ಷ ಕೆ.ಎಸ್.ಕುಲಕಣರ್ಿ, ಕಾರ್ಯದಶರ್ಿ ಡಿ.ಎಮ್.ಗರಗದ, ಬಿ.ಎಚ್.ಇ.ಓ ಎಸ್.ಎಸ್.ಮುತ್ನಾಳ, ಎನ್.ಡಿ.ಖಾಡೆ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ,ನಸರ್ಿಂಗ್ ವಿದ್ಯಾಥರ್ಿಗಳು, ಐ.ಸಿ.ಡಿ.ಎ.ಎಸ್.ಮೇಲ್ವಿಚಾರಕರು ಇದ್ದರು.
****
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 