ಸಾಮೂಹಿಕ ಹಲ್ಲೆ: ಉನ್ನತ ಮಟ್ಟದ ಸಮಿತಿ ರಚನೆ
ನವದೆಹಲಿ: ಗೋರಕ್ಷಕರ ಹೆಸರಿನಲ್ಲಿ ಮತ್ತು ಮಕ್ಕಳ ಕಳ್ಳರೆಂಬ ವದಂತಿಗಳಿಗೆ ಕಿವಿಗೊಟ್ಟು ವ್ಯಕ್ತಿಗಳ ಮೇಲೆ ಗುಂಪು ಗುಂಪಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಪ್ರಕರಣಗಳು ಹೆಚ್ಚಿತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸಕರ್ಾರ, ಇದನ್ನು ತಡೆಗಟ್ಟಲು ಉನ್ನತ ಮಟ್ಟದ ಸಮಿತಿಯೊಂದನ್ನು ಸೋಮವಾರ ರಚಿಸಿದೆ.
ಕೇಂದ್ರ ಗೃಹ ಕಾರ್ಯದಶರ್ಿ ರಾಜೀವ್ ಗೌಬಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಸಾಮೂಹಿಕ ಹಲ್ಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡುವಂತೆ ತಿಳಿಸಲಾಗಿದೆ.
ಈ ಸಮಿತಿಯಲ್ಲಿ ಕಾನೂನು, ನ್ಯಾಯಾಂಗ, ಸಾಮಾಜಿಕ ಮತ್ತು ಸಬಲೀಕರಣ ಇಲಾಖೆಯ ಕಾರ್ಯದಶರ್ಿಗಳು, ತಜ್ಞರು ಸದಸ್ಯರಾಗಿದ್ದಾರೆ.
ಈ ನಡುವೆ ಗೃಹ ಸಚಿವ ರಾಜ್ನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಚಿವರ ಸಮಿತಿಯನ್ನು ಸಹ ರಚಿಸಲಾಗಿದ್ದು, ಉನ್ನತ ಮಟ್ಟದ ಸಮಿತಿಯು ಸಲಹೆ, ಸೂಚನೆ, ಶಿಫಾರಸುಗಳನ್ನು ಸಚಿವರ ಸಮಿತಿಗೆ ಸಲ್ಲಿಸಲಿದೆ.
ಸಚಿವರ ಸಮಿತಿ ರಾಜೀವ್ ಗೌಬಾ ನೇತೃತ್ವದ ಸಮಿತಿಯುವ ನೀಡುವ ವರದಿಯನ್ನು ಪರಿಶೀಲಿಸಿ ಅಂತಿಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 