ಸಾಮೂಹಿಕ ಹಲ್ಲೆ: ಉನ್ನತ ಮಟ್ಟದ ಸಮಿತಿ ರಚನೆ
ನವದೆಹಲಿ: ಗೋರಕ್ಷಕರ ಹೆಸರಿನಲ್ಲಿ ಮತ್ತು ಮಕ್ಕಳ ಕಳ್ಳರೆಂಬ ವದಂತಿಗಳಿಗೆ ಕಿವಿಗೊಟ್ಟು ವ್ಯಕ್ತಿಗಳ ಮೇಲೆ ಗುಂಪು ಗುಂಪಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಪ್ರಕರಣಗಳು ಹೆಚ್ಚಿತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸಕರ್ಾರ, ಇದನ್ನು ತಡೆಗಟ್ಟಲು ಉನ್ನತ ಮಟ್ಟದ ಸಮಿತಿಯೊಂದನ್ನು ಸೋಮವಾರ ರಚಿಸಿದೆ.
ಕೇಂದ್ರ ಗೃಹ ಕಾರ್ಯದಶರ್ಿ ರಾಜೀವ್ ಗೌಬಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಸಾಮೂಹಿಕ ಹಲ್ಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡುವಂತೆ ತಿಳಿಸಲಾಗಿದೆ.
ಈ ಸಮಿತಿಯಲ್ಲಿ ಕಾನೂನು, ನ್ಯಾಯಾಂಗ, ಸಾಮಾಜಿಕ ಮತ್ತು ಸಬಲೀಕರಣ ಇಲಾಖೆಯ ಕಾರ್ಯದಶರ್ಿಗಳು, ತಜ್ಞರು ಸದಸ್ಯರಾಗಿದ್ದಾರೆ.
ಈ ನಡುವೆ ಗೃಹ ಸಚಿವ ರಾಜ್ನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಚಿವರ ಸಮಿತಿಯನ್ನು ಸಹ ರಚಿಸಲಾಗಿದ್ದು, ಉನ್ನತ ಮಟ್ಟದ ಸಮಿತಿಯು ಸಲಹೆ, ಸೂಚನೆ, ಶಿಫಾರಸುಗಳನ್ನು ಸಚಿವರ ಸಮಿತಿಗೆ ಸಲ್ಲಿಸಲಿದೆ.
ಸಚಿವರ ಸಮಿತಿ ರಾಜೀವ್ ಗೌಬಾ ನೇತೃತ್ವದ ಸಮಿತಿಯುವ ನೀಡುವ ವರದಿಯನ್ನು ಪರಿಶೀಲಿಸಿ ಅಂತಿಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 