ಹಣಕಾಸು ಕಂಪನಿ ಲೂಟಿ: ಅಂತಾರಾಜ್ಯ ತಂಡದ ಬಂಧನ
ಪಾಲ್ಘರ್, ಜೂನ್ 6, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಳ್ಳತನ, ದರೋಡೆ ಲೂಟಿ ಮಾಡುತ್ತಿದ್ದ ಅಂತಾರರಾಜ್ಯ ತಂಡದ ನಾಲ್ವರು ಸದಸ್ಯರನ್ನು ಗುರುವಾರ ಬಂಧಿಸಲಾಗಿದೆ.ಈ ಮೂಲಕ 2019 ರ ಸೆಪ್ಟೆಂಬರ್ನಲ್ಲಿ 1.77 ಕೋಟಿ ರೂಪಾಯಿಗಳ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಬಗೆಹರಿಸಿದ್ದಾರೆ. ಈ ಕುರಿತು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದತ್ತಾತ್ರೇಯ ಶಿಂಧೆ, 2019 ರಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ನಲ್ಲಾ ಸೊಪಾರಾದ ಸೆಂಟ್ರಲ್ ಪಾರ್ಕ್ನಲ್ಲಿರುವ ಚಿನ್ನದ ಹಣಕಾಸು ಕಚೇರಿಗೆ ನುಗ್ಗಿ ಲೂಟಿ ಮಾಡಿದ್ದರು.
ಪೊಲೀಸ್ ತನಿಖಾ ತಂಡವು ನಾಲ್ವರ ಬಗ್ಗೆ ಸುಳಿವು ನೀಡಿ ಗುರುವಾರ ಅವರನ್ನು ಮುಂಬೈನಲ್ಲಿ ಬಂಧಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಬಂಧಿತ ಆರೋಪಿಗಳು ಮತ್ತು ಇತರ ಗ್ಯಾಂಗ್ ಸದಸ್ಯರ ವಿರುದ್ಧ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ವಾಹನ ಕಳ್ಳತನಕ್ಕೆ ಸಂಬಂಧಿಸಿದ ಹಲವು ಅಪರಾಧಗಳು ಮುಂಬೈ, ಥಾಣೆ, ಪಾಲ್ಘರ್, ಗುಜರಾತ್ ಮತ್ತು ಕರ್ನಾಟಕದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ ಬಂಧಿತರನ್ನು ಶುಕ್ರವಾರ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು ಅವರನ್ನು ಇದೆ 14 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 