ಗೋಮಟೇಶ ವಿದ್ಯಾಪೀಠದಲ್ಲಿ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ
150th anniversary of Vande Mataram celebrated at Gomatesh Vidyapeeth
ಬೆಳಗಾವಿ 26: ಸ್ಥಳೀಯ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಲ್ಲಿ ಇಂದು ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ವಂದೇಮಾತರಂ ಗೀತೆಯನ್ನು ಸಾಮೂಹಿಕವಾಗಿ ಹಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ನೇತ್ರತ್ವವನ್ನು ಗೋಮಟೇಶ ವಿದ್ಯಾಪೀಠದ ಅಧಿಷ್ಠಾತಾ, ಬೆಳಗಾವಿ ಗ್ರಾಮೀಣ ವಿಧಾನ ಸಭಾ ಮತಕ್ಷೇತ್ರದ ಮಾಜಿ ಶಾಸಕ ಸಂಜಯ ಬಿ ಪಾಟೀಲ ಅವರು ವಹಿಸಿದ್ದರು.
ಸಪಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯ ಜಗದೀಶ ಹಿರೇಮಣಿ ಅವರು ಭಾಗವಹಿಸುವುದರ ಮೂಲಕ ಮಕ್ಕಳಿಗೆ ವಂದೇ ಮಾತರಂ ಗೀತೆಯ ಮಹತ್ವವನ್ನು ವಿವರಿಸಿದರು. ನಾಡಗೀತೆ, ರಾಷ್ಟ್ರಗೀತೆ, ಹಾಗೂ ವಂದೇ ಮಾತರಂ ಗೀತೆಯನ್ನು ಸಾಮೂಹಿಕವಾಗಿ ಹಾಡುವುದರ ಮೂಲಕ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯನ್ನು ಸಂಭ್ರಮಿಸಲಾಯಿತು.
ಬೆಳಗಾವಿ ಗ್ರಾಮಾಂತರ ಭಾ.ಜ.ಪ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ ಹಾಗೂ ಶಿವುಕುಮಾರ ್ಘ ಯಲ್ಲೇಶ ಕೋಲಕಾರ, ಗೋಮಟೇಶ ವಿದ್ಯಾಪೀಠದ, ನಿರ್ದೇಶಕರುಗಳಾದ ವೃಷಭ ಸಂಜಯ ಪಾಟೀಲ, ಸನತ್ಕುಮಾರ ವ್ಹಿ.ವ್ಹಿ. ಅವರು ಉಪಸ್ಥಿತರಿದ್ದರು.
ಇನ್ನುಳಿದಂತೆ ಗೋಮಟೇಶ ವಿದ್ಯಾದಪೀಠದ ಶಾಲಾ ಕಾಲೇಜುಗಳ ಮುಖ್ಯಸ್ಥರಾದ, ಡಿ.ಎಸ್.ಹನಗಂಡಿ, ಸುನೀಲ ಬಿ ಪಾಟೀಲ, ಸರೋಜಾ ಪಾಟೀಲ, ಪಿ.ಎಂ.ನಾಯಕ, ಮಹೇಶ ಕಾರೇಕರ, ಬೈರು ಪಾಟೀಲ, ಅಕ್ಷಯ ನಂದಗಾಂವ, ನವೀನ ಭಸ್ಮೇ, ಜ್ಯೋತಿ ಮೋರೆ, ರತ್ನಾ ಬಡಗೇರ, ಹಾಗೂ ಗೋಮಟೇಶ ವಿದ್ಯಾಪೀಠದ ಸಮಸ್ತ ಶಿಕ್ಷಕ-ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಮಕ್ಕಳಿಗೆ ಗೀತೆಯ ಆದೇಶವನ್ನು ದೈಹಿಕ ಶಿಕ್ಷಣ ಶಿಕ್ಷಕ ಮಹಾವೀರ ಬುಡಗೌಡರ ಅವರು ನೀಡಿದರು. ಕಾರ್ಯಕ್ರಮವನ್ನು ಪದ್ಮಾಕರ ಖತಗಲ್ಲಿ ಅವರು ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 