ಗೋಮಟೇಶ ವಿದ್ಯಾಪೀಠದಲ್ಲಿ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ
150th anniversary of Vande Mataram celebrated at Gomatesh Vidyapeeth
ಬೆಳಗಾವಿ 26: ಸ್ಥಳೀಯ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಲ್ಲಿ ಇಂದು ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ವಂದೇಮಾತರಂ ಗೀತೆಯನ್ನು ಸಾಮೂಹಿಕವಾಗಿ ಹಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ನೇತ್ರತ್ವವನ್ನು ಗೋಮಟೇಶ ವಿದ್ಯಾಪೀಠದ ಅಧಿಷ್ಠಾತಾ, ಬೆಳಗಾವಿ ಗ್ರಾಮೀಣ ವಿಧಾನ ಸಭಾ ಮತಕ್ಷೇತ್ರದ ಮಾಜಿ ಶಾಸಕ ಸಂಜಯ ಬಿ ಪಾಟೀಲ ಅವರು ವಹಿಸಿದ್ದರು.
ಸಪಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯ ಜಗದೀಶ ಹಿರೇಮಣಿ ಅವರು ಭಾಗವಹಿಸುವುದರ ಮೂಲಕ ಮಕ್ಕಳಿಗೆ ವಂದೇ ಮಾತರಂ ಗೀತೆಯ ಮಹತ್ವವನ್ನು ವಿವರಿಸಿದರು. ನಾಡಗೀತೆ, ರಾಷ್ಟ್ರಗೀತೆ, ಹಾಗೂ ವಂದೇ ಮಾತರಂ ಗೀತೆಯನ್ನು ಸಾಮೂಹಿಕವಾಗಿ ಹಾಡುವುದರ ಮೂಲಕ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯನ್ನು ಸಂಭ್ರಮಿಸಲಾಯಿತು.
ಬೆಳಗಾವಿ ಗ್ರಾಮಾಂತರ ಭಾ.ಜ.ಪ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ ಹಾಗೂ ಶಿವುಕುಮಾರ ್ಘ ಯಲ್ಲೇಶ ಕೋಲಕಾರ, ಗೋಮಟೇಶ ವಿದ್ಯಾಪೀಠದ, ನಿರ್ದೇಶಕರುಗಳಾದ ವೃಷಭ ಸಂಜಯ ಪಾಟೀಲ, ಸನತ್ಕುಮಾರ ವ್ಹಿ.ವ್ಹಿ. ಅವರು ಉಪಸ್ಥಿತರಿದ್ದರು.
ಇನ್ನುಳಿದಂತೆ ಗೋಮಟೇಶ ವಿದ್ಯಾದಪೀಠದ ಶಾಲಾ ಕಾಲೇಜುಗಳ ಮುಖ್ಯಸ್ಥರಾದ, ಡಿ.ಎಸ್.ಹನಗಂಡಿ, ಸುನೀಲ ಬಿ ಪಾಟೀಲ, ಸರೋಜಾ ಪಾಟೀಲ, ಪಿ.ಎಂ.ನಾಯಕ, ಮಹೇಶ ಕಾರೇಕರ, ಬೈರು ಪಾಟೀಲ, ಅಕ್ಷಯ ನಂದಗಾಂವ, ನವೀನ ಭಸ್ಮೇ, ಜ್ಯೋತಿ ಮೋರೆ, ರತ್ನಾ ಬಡಗೇರ, ಹಾಗೂ ಗೋಮಟೇಶ ವಿದ್ಯಾಪೀಠದ ಸಮಸ್ತ ಶಿಕ್ಷಕ-ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಮಕ್ಕಳಿಗೆ ಗೀತೆಯ ಆದೇಶವನ್ನು ದೈಹಿಕ ಶಿಕ್ಷಣ ಶಿಕ್ಷಕ ಮಹಾವೀರ ಬುಡಗೌಡರ ಅವರು ನೀಡಿದರು. ಕಾರ್ಯಕ್ರಮವನ್ನು ಪದ್ಮಾಕರ ಖತಗಲ್ಲಿ ಅವರು ನಿರೂಪಿಸಿ ವಂದಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 