ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ ನಿಮಿತ್ಯ ಪಾದಯಾತ್ರೆ
22nd Punyaradhana Nimitya Padayatra of Shivashantaveera Mahashivayogi
ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ ನಿಮಿತ್ಯ ಪಾದಯಾತ್ರೆ
ಕೊಪ್ಪಳ 23: ಸಂಸ್ಥಾನ ಗವಿಮಠದ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯರಾಧನೆ ನಿಮಿತ್ಯ ದಿನಾಂಕ 23 ರಂದು ಬೆಳಿಗ್ಗೆ 6:00 ಗಂಟೆಗೆ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಮಳೆಮಲ್ಲೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ ಅಶೋಕ್ ಸರ್ಕಲ್ ಹಾಗೂ ಗಡಿಯಾರ ಕಂಬದ ಮುಖಾಂತರ ಗವಿಮಠಕ್ಕೆ 9:00ಗಂಟೆಗೆ ತಲುಪಿತು. ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಾದಯಾತ್ರೆಯ ನಂತರ ಗವಿಸಿದ್ಧೇಶ್ವರ ಕತೃ ಗದ್ದುಗೆ ಹಾಗೂ ಶಿವಶಾಂತವೀರ ಮಹಾಸ್ವಾಮಿಗಳ ಗದ್ದುಗೆಯ ದರ್ಶನ ಪಡೆದು ಧನ್ಯರಾದರು. ಶ್ರೀಮಠದ ದಾಸೋಹದಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಭಕ್ತಾಧಿಗಳು ಪ್ರಸಾದವನ್ನು ಸ್ವೀಕರಿಸಿದರು ಎಂದು ಗವಿಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 