ಭಗವಾನ್ ಮಹಾವೀರರ 2624 ಜನ್ಮ ಕಲ್ಯಾಣಕ ಮಹೋತ್ಸವ
2624th birth anniversary of Lord Mahavira
ಭಗವಾನ್ ಮಹಾವೀರರ 2624 ಜನ್ಮ ಕಲ್ಯಾಣಕ ಮಹೋತ್ಸವ
ಕಾಗವಾಡ 10 : ಇಡೀ ವಿಶ್ವಕ್ಕೆ ಸತ್ಯ ಅಹಿಂಸಾ ತತ್ವಗಳನ್ನು ಮತ್ತು ನೀನು ಬದುಕು ಇನ್ನೊಬ್ಬರನ್ನು ಬದುಕಲು ಬಿಡು ಎಂಬ ಸಂದೇಶ ಸಾರಿದ ಭಗವಾನ್ ಮಹಾವೀರರ 2624 ಜನ್ಮ ಕಲ್ಯಾಣಕ ಮಹೋತ್ಸವ ತಾಲೂಕಾಡಳಿತ ಕಚೇರಿಯಲ್ಲಿ, ತಾಲೂಕಿನ ಎಲ್ಲ ಗ್ರಾಮಗಳ ಜೈನಮಂದಿರದಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.
ಗುರುವಾರ ದಿ. 10 ರಂದು ತಹಸಿಲ್ದಾರ ಕಚೇರಿಯಲ್ಲಿ ತಹಶೀಲ್ದಾರ ರಾಜೇಶ್ ಬುರ್ಲಿ ಇವರು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭಗವಾನ ಮಹಾವೀರರು ಇಡೀ ವಿಶ್ವಕ್ಕೆ ಸತ್ಯ, ಅಂಹಿಸೆ ಮತ್ತು ತ್ಯಾಗದ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.ಕರ್ನಾಟಕ ರಾಜ್ಯ ಜೈನ್ ಅಸೋಸಿಯೇಷನ ಉಪಾಧ್ಯಕ್ಷ ಶೀತಲಗೌಡ ಪಾಟೀಲ ಮಾತನಾಡಿ, ಭಗವಾನ್ ಮಹಾವೀರರ ಸಂದೇಶದ ಪಾಲನೆ ನಮ್ಮ ಜೀವನದಲ್ಲಿ ಮಾಡಿಕೊಳೋಣ. ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಭಗವಾನ್ ಮಹಾವೀರರ ಜನ್ಮ ಕಲ್ಯಾಣಕ ಮಹೋತ್ಸವ ಆಚರಿಸುತ್ತಿರುವ ಬಗ್ಗೆ ಸರ್ಕಾರಕ್ಕೆ, ಎಲ್ಲ ಇಲಾಖೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸಮಾಜದ ವತಿಯಿಂದ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ತಹಶೀಲ್ದಾರ ಕಚೇರಿ, ತಾಲೂಕ ಪಂಚಾಯಿತಿಯ ಕಚೇರಿ, ಪಟ್ಟಣ ಪಂಚಾಯಿತಿಯ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಭಗವಾನ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜನ್ಮ ಜಯಂತಿ ಆಚರಿಸಲಾಯಿತು.
ಈ ವೇಳೆ ಉಪತಹಸಿಲ್ದಾರ ಅಣ್ಣಾಸಾಹೇಬ ಕೋರೆ, ಸಿಡಿಪಿಓ
ಸಂಜೀವಕುಮಾರ ಸದಲಗೆ, ತಾ.ಪಂ. ಇಓ ವೀರಣ್ಣಾ ವಾಲಿ, ಪ.ಪಂ.ಮುಖ್ಯಾಧಿಕಾರಿ ಕೆ.ಕೆ. ಗಾವಡೆ, ಎಂ.ಆರ್ ಪಾಟೀಲ ಹಾಗೂ ಎಲ್ಲ ಇಲಾಖೆಗಳ ಸಿಬ್ಬಂದಿ ವರ್ಗದವರು, ತಾಲೂಕಿನ ರಾಜ್ಯ ಸರ್ಕಾರದ ಪಂಚ್ ಗ್ಯಾರಂಟಿ ಸಮಿತಿ ಅಧ್ಯಕ್ಷ ವಿಜಯಕುಮಾರ ಅಕಿವಾಟೆ, ಪಟ್ಟಣದ ಜೈನ್ ಸಮಾಜ ಸಂಘಟನೆಯ ಅಧ್ಯಕ್ಷ ನ್ಯಾಯವಾದಿ ತಾತ್ಯಾಸಾಹೇಬ ದೋತ್ರೆ,
ಸಮಾಜದ ಮುಖಂಡರಾದ ಸುಧೀರ ಹುದ್ದಾರ, ಶಾಂತಿನಾಥ ಕರವ, ಅಜೀತ ಕರವ, ಅನಿಲ ಶಹಾಪುರೆ, ಭರತ ಚಿಂಚವಾಡೆ, ಪ್ರಶಾಂತ ಖುರುಪೆ, ಕಲ್ಲು ತೇೆರದಾಳ, ಮಹಾವೀರ ಬಿಂದಿಗೆ, ಆದಿನಾಥ ಕರವ ಸೇರಿದಂತೆ ಜೈನ ಹಾಗೂ ಜೈನರ ಸಮಾಜ ಪ್ರಮುಖರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 