ಹಜರತ್ ಸೈಯದ್ ಚಮನ್ಶಾವಲಿಯವರ 363ನೇ ಉರುಸ್
ಲೋಕದರ್ಶನವರದಿ
ರಾಣೇಬೆನ್ನೂರ 26: ತಾಲೂಕಿನ ಮುದೇನೂರು ಗ್ರಾಮದ ಹಜರತ್ ಸೈಯದ್ ಚಮನ್ಶಾವಲಿ ಚಿಸ್ತಿ ಅವರ 363ನೇ ಉರುಸ್ ಅಂಗವಾಗಿ ಹಿಂದೂ-ಮುಸ್ಲಿಂ ಬಾಂಧವರು ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ರಾತ್ರಿ ಪವಿತ್ರ ಗಂಧ ಸಂದಲ್ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಗಂಧ ಸಂದಲ್ ಮೆರವಣಿಗೆ ಚಾಲನೆ ನೀಡಿದ ಮಹಬೂಬಸಾಬ್ ಶೇಖಸನದಿ ಅವರು, ನಮ್ಮ ಪೂರ್ವಜರ ಕಾಲದಿಂದಲೂ ಹಿಂದೂ-ಮುಸ್ಲಿಂ ಬಾಂಧವರು ಒಟ್ಟಿಗೆ ಸೇರಿ ಯಾವುದೇ ಬೇಧವಿಲ್ಲದೆ ಸಾಮರಸ್ಯದಿಂದ ಆಚರಿಸುತ್ತಾ ಬಂದಿದ್ದೇವೆ, ಈ ಸಂಪ್ರದಾಯ ಹೀಗೆ ಮುಂದುವರೆಯಲಿದೆ ಎಂದರು.
ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೂಲ ದಗರ್ಾವನ್ನು ತಲುಪಿದ ಬಳಿಕ ಗಂಧ ಸಮಪರ್ಿಸಲಾಯಿತು. ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿ, ಅಶೋಕಗೌಡ ಗಂಗನಗೌಡ್ರ, ಷಣ್ಮುಖನಗೌಡ ಗಂಗನಗೌಡ್ರ, ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಅನ್ವರಸಾಬ್ ಶೇಖಸನದಿ, ನಬೀಸಾಬ್ ನಂದಿಹಳ್ಳಿ, ಖಾಸಿಂಸಾಬ್ ಬಿಲ್ಲಹಳ್ಳಿ, ನಿವೃತ್ತ ಶಿಕ್ಷಕ ಎಸ್.ಕೆ.ಜೋಗಿ, ಮಂಜುನಾಥ ಪುಟ್ಟಕ್ಕನವರ, ನಬೀಸಾಬ್ ನಂದಿಹಳ್ಳಿ, ಗುಳ್ಳೆಮ್ಮ ಹರಿಜನ, ಶೀಲಾ ಗಂಗನಗೌಡ್ರ, ರುದ್ರಮುನಿ ರಾಮಕ್ಕನವರ, ಕಲ್ಲಪ್ಪ ಜುಂಜೇರ, ರೇವಣಸಿದ್ದಪ್ಪ ಇಂಗಳಗೊಂದಿ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಮೆರವಣಿಗೆಯ ಮುಂಚೂಣಿಯಲ್ಲಿ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 