ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೆಯ ಪುಣ್ಯಸ್ಮರಣೆ ಕಾರ್ಯಕ್ರಮ

ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೆಯ ಪುಣ್ಯಸ್ಮರಣೆ ಕಾರ್ಯಕ್ರಮ 44th commemoration program of poet Dr. D.R. Bendre

ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೆಯ ಪುಣ್ಯಸ್ಮರಣೆ ಕಾರ್ಯಕ್ರಮ 

  ಧಾರವಾಡ 21: ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌, ಧಾರವಾಡ ವತಿಯಿಂದ ದಿನಾಂಕ: 26.10.2025ರಂದು ಸಂಜೆ 5.00 ಗಂಟೆಗೆ ಡಾ.ದ.ರಾ.ಬೇಂದ್ರೆ ಭವನ, ಸಾಧನಕೇರಿ, ಧಾರವಾಡ ಇಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಏರಿ​‍್ಡಸಲಾಗಿದೆ.  ಹಿರಿಯ ಸಾಹಿತಿಗಳು ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಮಲ್ಲಿಕಾ ಘಂಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಧಾರವಾಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪಿ.ಶುಭ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  ಟ್ರಸ್ಟ್‌ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ನಂತರ ಧಾರವಾಡದ ಗಾಯಕಿ ವಿದುಷಿ ರಾಧಾ ದೇಸಾಯಿ ಮತ್ತು ವೃಂದದವರು ಡಾ.ದ.ರಾ.ಬೇಂದ್ರೆಯವರ ಗೀತೆಗಳ ಗಾಯನ ಪ್ರಸ್ತುತ ಪಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಟ್ರಸ್ಟ್‌ ಸದಸ್ಯರು ಹಾಗೂ ಹಿರಿಯ ಸಾಹಿತಿಗಳು ಭಾಗವಹಿಸಲಿದ್ದಾರೆ.