ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026 ಮಹಾದಾಸೋಹದಲ್ಲಿ 50 ಜನ ಬಾಣಸಿಗರಿಂದ ಹಪ್ಪಳದ ತಯಾರಿಕೆ
50 chefs prepare Happalam at Sri Gavisiddheshwara Jatra Mahotsav-2026 Mahadasoha
ಕೊಪ್ಪಳ 07: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಮೂರನೇ ದಿನವಾದ 7.01.26ರ ಬುಧವಾರದಂದು ವಿಶೇಷ ಖಾದ್ಯವಾದ ಹಪ್ಪಳ ವಿತರಿಸಲಾಯಿತು. ಕಳೆದ 8 ವರ್ಷಗಳಿಂದ ಜಾತ್ರಾ ವಿವಿಧ ಮಿರ್ಚಿ,ಜಿಲೇಬಿ ತಯಾರಿಕೆಯ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಸಿರಿಗೇರೆಯ ಗವಿಶ್ರೀ ಸ್ನೇಹ ಗೆಳೆಯರ ಬಳಗ ಹಾಗೂ ಉದಯ ಗ್ರೂಪ್ ಗೆಳೆಯರ ಬಳಗ ಹಾಗೂ ಸಿದ್ರಾಂಪುರ, ಹಾವಿನಾಳ,ಸಿರಿಗೇರಿ,ದಾಸಾಪುರ, ಕೊಂಚಗೇರಿ,ಮುತ್ತಟ್ ನೂರು, ಗುಂಡಿಗನೂರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಈ ವರ್ಷ ಹಪ್ಪಳ ವಿತರಣಾ ಸೇವೆ ಕೈಗೊಂಡಿದೆ.
ಹಪ್ಪಳ ತಯಾರಿಕೆಗೆ 14 ಡಬ್ಬಿ ಎಣ್ಣೆ, ಹಪ್ಪಳ ತಯಾರಿಕೆಗೆ 50 ಜನ ಬಾಣಸಿಗರು ಹಾಗೂ ಅವರಿಗೆ 20 ಜನ ಸಹಾಯ ಮಾಡುವುದರ ಮೂಲಕ ಹಪ್ಪಳ ತಯಾರಿಕೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಒಟ್ಟು 5 ಲಕ್ಷ ಹಪ್ಪಳಗಳನ್ನು ತಯಾರಿಸುವುದರ ಮೂಲಕ ಜಾತ್ರಗೆ ಬಂದ ಭಕ್ತಾಧಿಗಳಿಗೆ ವಿತರಿಸುವ ಸೇವೆಗೈದರು ಎಂದು ಶ್ರೀ ಗವಿಮಠದ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 