ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026 ಮಹಾದಾಸೋಹದಲ್ಲಿ 50 ಜನ ಬಾಣಸಿಗರಿಂದ ಹಪ್ಪಳದ ತಯಾರಿಕೆ
50 chefs prepare Happalam at Sri Gavisiddheshwara Jatra Mahotsav-2026 Mahadasoha
ಕೊಪ್ಪಳ 07: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಮೂರನೇ ದಿನವಾದ 7.01.26ರ ಬುಧವಾರದಂದು ವಿಶೇಷ ಖಾದ್ಯವಾದ ಹಪ್ಪಳ ವಿತರಿಸಲಾಯಿತು. ಕಳೆದ 8 ವರ್ಷಗಳಿಂದ ಜಾತ್ರಾ ವಿವಿಧ ಮಿರ್ಚಿ,ಜಿಲೇಬಿ ತಯಾರಿಕೆಯ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಸಿರಿಗೇರೆಯ ಗವಿಶ್ರೀ ಸ್ನೇಹ ಗೆಳೆಯರ ಬಳಗ ಹಾಗೂ ಉದಯ ಗ್ರೂಪ್ ಗೆಳೆಯರ ಬಳಗ ಹಾಗೂ ಸಿದ್ರಾಂಪುರ, ಹಾವಿನಾಳ,ಸಿರಿಗೇರಿ,ದಾಸಾಪುರ, ಕೊಂಚಗೇರಿ,ಮುತ್ತಟ್ ನೂರು, ಗುಂಡಿಗನೂರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಈ ವರ್ಷ ಹಪ್ಪಳ ವಿತರಣಾ ಸೇವೆ ಕೈಗೊಂಡಿದೆ.
ಹಪ್ಪಳ ತಯಾರಿಕೆಗೆ 14 ಡಬ್ಬಿ ಎಣ್ಣೆ, ಹಪ್ಪಳ ತಯಾರಿಕೆಗೆ 50 ಜನ ಬಾಣಸಿಗರು ಹಾಗೂ ಅವರಿಗೆ 20 ಜನ ಸಹಾಯ ಮಾಡುವುದರ ಮೂಲಕ ಹಪ್ಪಳ ತಯಾರಿಕೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಒಟ್ಟು 5 ಲಕ್ಷ ಹಪ್ಪಳಗಳನ್ನು ತಯಾರಿಸುವುದರ ಮೂಲಕ ಜಾತ್ರಗೆ ಬಂದ ಭಕ್ತಾಧಿಗಳಿಗೆ ವಿತರಿಸುವ ಸೇವೆಗೈದರು ಎಂದು ಶ್ರೀ ಗವಿಮಠದ ಪ್ರಕಟಣೆ ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 