60 ಕೆಜಿ ಶ್ರೀಗಂಧದ ತುಂಡು ವಶ: ಆರೋಪಿ ಪರಾರಿ
60 kg piece of sandalwood seized: Accused absconded
ಮುಂಡಗೋಡ 03: ಸುಮಾರು 60 ಕೆಜಿ ಶ್ರೀಗಂಧವನ್ನು ದಾಸ್ತಾನು ಮಾಡಿಕೊಂಡಿದ್ದ ವ್ಯಕ್ತಿಯ ಮನೆ ಮೇಲೆ ದಾಳಿ ನಡೆಸಿದ ಮುಂಡಗೋಡ ವಲಯ ಅರಣ್ಯಾಧಿಕಾರಿ ಅಪ್ಪಾಸಾಹೇಬ ಕಲ್ಲಶೆಟ್ಟಿ ನೇತೃತ್ವದ ತಂಡ ಮಂಗಳವಾರ ಶ್ರೀಗಂಧವನ್ನು ವಶಪಡಿಸಿಕೊಂಡ ಕುರಿತು ವರದಿಯಾಗಿದೆ.
ದಾಸ್ತಾನು ಮಾಡಿಕೊಂಡಿದ್ದ ವ್ಯಕ್ತಿಯನ್ನು ಅಗಡಿ ಗ್ರಾಮದ ಪರಶುರಾಮ ಲಮಾಣಿ ಎಂದು ಹೇಳಲಾಗುತ್ತಿದೆ. ಮುಂಡಗೋಡ ವಲಯದ ಇಂದೂರ ಶಾಖೆಯ ನಂದಿಕಟ್ಟಾಬೀಟ್ ವ್ಯಾಪ್ತಿಯ ಅಗಡಿ ಗ್ರಾಮದಲ್ಲಿ ಆರೋಪಿಪರಶುರಾಮ ತನ್ನ ಮನೆಯಲ್ಲಿ ಶ್ರೀಗಂಧವನ್ನುಅನಧಿಕೃತವಾಗಿ ದಾಸ್ತಾನು ಮಾಡಿಕೊಂಡಿರುವ ಖಚಿತ ಮಾಹಿತಿ ಮೇರೆ ದಾಳಿ ನಡೆಸಿದ ಅರಣ್ಯ ಇಲಾಖೆ ಸುಮಾರು 60 ಕೆಜಿ ಶ್ರೀ ಗಂಧದ ತುಂಡಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಯಲ್ಲಾಪುರ ಉಪಅರಣ್ಯ ಸಂರಕ್ಷಾಣಾಧಿಕಾರಿಗಳಾದಹರ್ಷಾಬಾನು ಜೆ.ಪಿ, ಮುಂಡಗೋಡ ಉಪವಿಭಾಗದ ಎಸಿಎಫ್ ರವಿ ಹುಲಕೋಟಿ ಇವರ ಮಾರ್ಗದರ್ಶನದಲ್ಲಿ ಮುಂಡಗೋಡ ವಲಯ ಆರ್.ಎಫ್.ಒ ಅಪ್ಪಾರಾವಕಲ್ಲಶೆಟ್ಟಿ, ಇಂದೂರ ಉಪವಲಯ ಅರಣ್ಯಾಧಿಕಾರಿ ಶ್ರೀಕಾಂತ ವೆರ್ಣೇಕರ, ಅರಣ್ಯ ರಕ್ಷಕರಾದ ಮರ್ದಾನಲಿ, ನಾರಾಯಣ ರಜಪೂತ ದಾಳಿ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 