ಕಲ್ಮೇಶ್ವರ ದೇವಾಲಯಗಳ 70 ನೇ ವರ್ಷದ ಜಾತ್ರಾ ಮಹೋತ್ಸವ
70th Year Jatra Mahotsav of Kalmeshwar Temples
ಕಲ್ಮೇಶ್ವರ ದೇವಾಲಯಗಳ 70 ನೇ ವರ್ಷದ ಜಾತ್ರಾ ಮಹೋತ್ಸವ
ಬ್ಯಾಡಗಿ 07 : ಸಾಮೂಹಿಕ ವಿವಾಹ ಮಾಡಿಕೊಳ್ಳುವದರಿಂದ ಅನಗತ್ಯ ಸಾಲ ಮಾಡುವದು ತಪ್ಪುತ್ತದೆ ಎಂದು ಪಟ್ಟಣದ ಪಾಠಶಾಲೆಯ ಚನ್ನಬಸಯ್ಯ ಶಾಸ್ತ್ರೀಗಳು ಹೇಳಿದರು. ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ದೇವಾಲಯಗಳ 70 ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ 7 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ 45 ವರ್ಷಗಳಿಂದ ಜಾತ್ರಾ ಸಮಿತಿಯವರು ಉಚಿತ ಸಾಮೂಹಿಕ ವಿವಾಹ ಏರಿ್ಡಸುತ್ತ ಬಂದಿದ್ದಾರೆ ಎಂದರು. ವೀರಯ್ಯ್ ಶಾಸ್ತ್ರೀಗಳು ಮಾತನಾಡಿ ದಂಪತಿಗಳಲ್ಲಿ ನಂಬಿಕೆ ವಿಶ್ವಾಸ ಹಾಗೂ ಪ್ರೀತಿ ಇದ್ದರೆ ಜೀವನ ಸುಖಮಯ ಆಗುತ್ತದೆ ಎಂದರು. ವರರು ವರದಕ್ಷಿಣೆ ಅಸೆ ಮಾಡದೇ ದುಡಿದು ಹಣ ಗಳಿಸಿ ಕುಟುಂಬದಲ್ಲಿ ಸಂತೋಷ ತರಬೇಕೆ ಹೊರತು ದುಷ್ಟ ಚಟಗಳಿಗೆ ಬಲಿಯಾಗಬಾರದು ಎಂದರು. ಜಾತ್ರಾ ಸಮಿತಿಯ ಅಧ್ಯಕ್ಷ ಮಲ್ಲಣ್ಣ ಹುಚಗೊಂಡರ. ಉಪಾಧ್ಯಕ್ಷ ಗಂಗಣ್ಣ ತಿಳವಳ್ಳಿ. ಗೌರವ ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ. ಖಜಾಂಚಿ ಶೆಂಬಣ್ಣ ಅಂಗಡಿ. ಸದಸ್ಯರಾದ ಶಿವಣ್ಣ ಶೆಟ್ಟರ. ಶಿವಣ್ಣ ಬಣಕಾರ ಹಾಗೂ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 