77ನೇ ಗಣರಾಜ್ಯೋತ್ಸವ ಆಚರಣೆ
77th Republic Day Celebration
ಸಿಂದಗಿ; 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದರೂ ಕೂಡಾ ರಾಜ್ಯದ ಸುಗಮ ಕಾರ್ಯನಿರ್ವಹಣೆಗೆ ಯಾವುದೇ ಪರಿಣಿತ ಮತ್ತು ರಾಜಕೀಯ ಅಧಿಕಾರವನ್ನು ಭಾರತ ಹೊಂದಿದಿಲ್ಲಾ. ಆ ಹೊತ್ತಿಗೆ, 1935 ರ ಭಾರತ ಸರ್ಕಾರದ ಕಾಯಿದೆಯು ಮೂಲಭೂತವಾಗಿ ಆಡಳಿತಕ್ಕೆ ತಿದ್ದುಪಡಿ ಮಾಡಲ್ಪಟ್ಟಿತು, 1950 ಜನೇವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಅನ್ವಯಿಸಿಕೊಂಡು ಗಣರಾಜ್ಯೋತ್ಸವ ವೆನಿಸಿಕೊಂಡಿತು. ಅಲ್ಲಿಂದೀಚೆಗೆ ಪ್ರತಿವರ್ಷ ಜನವರಿ 26 ರಂದು ಅತ್ಯಂತ ಸಡಗರ ಸಂಭ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲ್ಪಡುತ್ತಿದೆ. ಎಂದು ಪತ್ರಕರ್ತ ಆನಂದ ಶಾಬಾದಿ ಹೇಳಿದರು.
ಪಟ್ಟಣದ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, 299 ಸದಸ್ಯರನ್ನು ಹೊಂದಿರುವ ಡಾ.ರಾಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಮೊದಲ ಸಭೆಯು ಡಿಸೆಂಬರ್ 1946 ರಲ್ಲಿ ಸಂವಿಧಾನ ಸಭೆಯನ್ನು ರಚಿಸಲಾಯಿತು. 2 ವರ್ಷ 11 ತಿಂಗಳು 18 ದಿನಗಳಲ್ಲಿ ಇದು ಅಂತಿಮವಾಗಿ 26 ನವೆಂಬರ್ 1949 ರಂದು ಪೂರ್ಣಗೊಂಡಿತು. ಇದನ್ನು 26 ಜನವರಿ 1950 ರಂದು ದೇಶಾದ್ಯಂತ ಜಾರಿಗೆ ತರಲಾಯಿತು.ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳದ್ದೇ ಸರ್ಕಾರ ಅಸ್ತಿತ್ವಕ್ಕೆ ಬಂದಿತು ಎಂದರು.
77ನೆ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಪಂ ಮಾಜಿ ಉಪಾಧ್ಯಕ್ಷ ಸಿದ್ದರಾಮ ಪಾಟೀಲ ಹೂನಳ್ಳಿ ನೇರವೇರಿಸಿದರು.
ಈ ಸಂದರ್ಭದಲ್ಲಿ ಕಾನಿಪ ಸಂಘದ ನೂತನ ಪದಾಧಿಕಾರಿಗಳೀಗೆ ಸನ್ಮಾನಿಸಿ ಗೌರವಿಸಲಾಯಿತು. ಪತ್ರಕರ್ತ ಇಸ್ಮಾಯಿಲ್ ಶೇಖ ಮಾತನಾಡಿ, ಈ ದೇಶಕ್ಕಾಗಿ ಶ್ರಮಿಸಿದ ಮಹಾಪುರುಷರ ಹಾಗೂ ಪ್ರತಿವರ್ಷ ಆಚರಿಸಲ್ಪಡುವ ರಾಷ್ಟ್ರೀಯ ಹಬ್ಬಗಳ ಮಹತ್ವವನ್ನು ಇಂದಿನ ಯುವ ಪಿಳಿಗೆ ಪರಿಚಯಿಸುವ ಕಾರ್ಯ ನಡೆದಾಗ ಮಾತ್ರ ರಾಷ್ಟ್ರೀಯ ಹಬ್ಬಗಳಿಗೆ ಆರ್ಥ ಬರುತ್ತದೆ ಎಂದು ಅಭಿಮತ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಕಾರ್ಯದರ್ಶಿ ಕಾಂಚನಾ ನಾಗರಬೆಟ್ಟ, ಶಕುಂತಲಾ ಹಿರೇಮಠ, ಮಾಜಿ ರಾಜ್ಯ ಪರಿಷತ್ ಸದಸ್ಯ ಸಂಗನಗೌಡ ಪಾಟೀಲ ಅಗಸಬಾಳ, ಗುತ್ತಿಗೆದಾರ ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ, ಪತ್ರಕರ್ತರಾದ ಪಂಡಿತ ಯಂಪೂರೆ, .ವಿಜು ಪತ್ತಾರ, ವಿನಾಯಕ ಅಗಸರ, ಸಿದ್ದು ಕಡಗಂಚಿ ಕಸಾಪ ಮಾಜಿ ಅಧ್ಯಕ್ಷ ಶಿವು ಬಡಾನೂರ, . ಸುಮಾ ವಸ್ತ್ರದ, ಶರಣಮ್ಮ ಬಿರಾದಾರ, ಸೇರಿದಂತೆ ಅನೇಕರಿದ್ದರು.
ಪ್ರಾಚಾರ್ಯ ಸಂದೀಪ ಚಾಂದಕವಟೆ ಸ್ವಾಗತಿಸಿದರು. ಶಿಕ್ಷಕಿ ನಿಶಾ ಕಲಾವಂತ ನಿರೂಪಿಸಿದರು. ರಾಜು ಕಾಂಬಳೆ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 