ಹಗಲು ಹೊತ್ತಿನಲ್ಲಿಯೇ ಇಲ್ಲಿ ಜೆಸಿಬಿ ಮೂಲಕ ಮಣ್ಣು ಅಗೆದು ಟಿಪ್ಪರ್
A JCB digs up soil here in broad daylight and dumps it into a tipper truck
ಸವದತ್ತಿ 11: ಸಮೀಪದ ಯಡ್ರಾಂವಿ ರಸ್ತೆಯ ಆದರ್ಶ ಶಾಲೆ ಹತ್ತಿರ ಗುಡ್ಡದ ವಾರಿಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ನಡೆದಿದೆ. ತಾಲುಕು ಆಡಳಿತ ಇದನ್ನು ತಡೆಯುವಲ್ಲಿ ಸಂಪೂರ್ಣ ವಿಫಲ ವಾಗಿದ್ದು ಇದು ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆಮಾಡಿ ಕೊಟ್ಟಂತಾಗಿದೆ.
ಹಗಲು-ರಾತ್ರಿ ಇಲ್ಲಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಟಾಚಿ ಮತ್ತು ಜೆಸಿಬಿ, ಟಿಪ್ಪರ್ ಗಳದ್ದೇ ದರ್ಬಾರ್ ಹೆಚ್ಚಾಗಿದೆ. ನಿರಂತರವಾಗಿ ಗರಸು ಮಣ್ಣು, ಬಗೆಯಲಾಗುತ್ತಿದ್ದು, ರಸ್ತೆ ಮೂಲಕ ವಿವಿಧೆಡೆ ಸಾಗಿಸಲಾಗುತ್ತಿದೆ.
ಪಕ್ಕದಲ್ಲಿ ಆದರ್ಶ ವಿದ್ಯಾಲಯ ವಿದೆ. ಹಗಲು ಹೊತ್ತಿನಲ್ಲಿಯೇ ಇಲ್ಲಿ ಜೆಸಿಬಿ ಮೂಲಕ ಮಣ್ಣು ಅಗೆದು ಟಿಪ್ಪರ್ ಗಳ ಮೂಲಕ ಸಾಗಿಸಲಾಗುತ್ತಿದೆ. ಆದರ್ಶ ಶಾಲೆಗೆ ವಿದ್ಯಾರ್ಥಿಗಳು ತೆರಳಲು ಈ ಚಿಕ್ಕ ರಸ್ತೆ ಒಂದೇ ಮಾರ್ಗವಾಗಿದೆ. ಇದೀಗ ಇಲ್ಲಿ ಟಿಪ್ಪರ್ ಗಳ ಹಾವಳಿ ಹೆಚ್ಚಾಗಿದ್ದು, ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ.
ಪ್ರಭಾವಿಗಳ ಹೆಸರು ಹೇಳಿ ಇಲ್ಲಿ ಅಕ್ರಮವಾಗಿ ಮಣ್ಣು ಅಗೆಯಲಾಗುತ್ತಿದೆ ಎನ್ನಲಾಗುತ್ತಿದೆ. ಅತ್ಯಧಿಕ ಪ್ರಮಾಣದಲ್ಲಿ ಅಕ್ರಮ ಮಣ್ಣು ಸಾಗಿಸಲಾಗುತ್ತಿದ್ದರೂ ಅಧಿಕಾರಿಗಳು ಕಂಡು ಕಾಣದಂತೆ ಜಾಣಮೌನ ವಹಿಸಿದ್ದಾರೆ.ಇನ್ನೂ ಅಧಿಕ ಭಾರ ವಾಹನಗಳು ಸಾಗುತ್ತಿರುವುದರಿಂದ ರಸ್ತೆಗಳು ನಲುಗಿ ಹೋಗಿವೆ. ಅನೇಕ ಕಡೆ ಗುಂಡಿಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ ಎಂದು ವಾಹನ ಸವಾರರೂ ಆಕ್ರೋಶ ಹೊರಹಾಕುತ್ತಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 