ಶ್ರೀನಿವಾಸ ಮಾನೆವರು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ
A floral tribute to the portrait of Mr. Srinivasa Vivekananda
ಶ್ರೀನಿವಾಸ ಮಾನೆವರು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ
ಹಾನಗಲ್ 13: ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಯುವ ಮನಸ್ಸುಗಳ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವಾರ್ಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ ಮಾತನಾಡಿ ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಇಡೀ ಪ್ರಪಂಚಕ್ಕೆ ಸ್ಪೂರ್ತಿ ತುಂಬಿದ್ದಾರೆ. ಇಂದಿಗೂ, ಎಂದಿಗೂ ಅವರು ಆಧ್ಯಾತ್ಮಿಕ ಗುರು, ಶ್ರೇಷ್ಠ ಆದರ್ಶ ವ್ಯಕ್ತಿ. ಯುವ ಸಮೂಹಕ್ಕೆ ನೀಡಿದ ಅವರ ಕರೆ ಏಳಿ, ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬುವುದು ಸರ್ವಕಾಲಕ್ಕೂ ನೆನೆಯುವ, ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ವಾಕ್ಯವಾಗಿದೆ. ಅವರ ತತ್ವ, ಸಿದ್ಧಾಂತಗಳನ್ನು ಪರಿಪಾಲಿಸುವ ಸಂಕಲ್ಪ ಗೈಯ್ಯುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಅಗತ್ಯವಿದೆ ಎಂದರು.
ಮುಖಂಡರಾದ ಗುರುರಾಜ್ ನಿಂಗೋಜಿ, ಶಿವು ಭದ್ರಾವತಿ, ಸುರೇಶ ನಾಗಣ್ಣನವರ, ಉಮೇಶ ಮಾಳಗಿ, ವಿನಯ ಬಂಕನಾಳ, ರೇಣುಕಾ ಚಾಕಾಪೂರ, ದುರ್ಗಪ್ಪ ಬಡಿಗೇರ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 