ಶಿರಹಟ್ಟಿಯಲ್ಲಿ ಮತ್ತಷ್ಟು ಬಿಗಿಗೊಳಿಸಿದ ಲಾಕ್ಡೌನ್
ಲೋಕದರ್ಶನ ವರದಿ
ಶಿರಹಟ್ಟಿ 11: ಕೊರೊನಾ ಸೋಂಕನ್ನು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಮಾರುಕಟ್ಟೆಗೆ ಪ್ರವೇಶ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡಗಳ ಮೂಲಕ ಬಂದ ಮಾಡಲಾಗಿದೆ.
ಮುಂಜಾಗ್ರತ ಕ್ರಮವಾಗಿ ಪಟ್ಟಣದ ನೆಹರೂ ವೃತ್ತ, ಬೆಳ್ಳಟ್ಟಿ ರಸ್ತೆ, ಬಸವೇಶ್ವರ ವೃತ್ತಗಳಲ್ಲಿ ಜನ ಅನಗತ್ಯವಾಗಿ ಓಡಾಡುವುದನ್ನು ತಡೆಯುವ ನಿಟ್ಟಿನಲ್ಲಿ ಪೋಲಿಸ್ ಬಸ್, ಬ್ಯಾರಿಕೇಡ ಮತ್ತು ಹಗ್ಗಗಳ ಮೂಲಕ ಮುಚ್ಚಲಾಗಿದೆ.
ಪಟ್ಟಣದ ಪ್ರಮುಖ ಜನ ನಿಬಿಡ ಪ್ರದೇಶಗಳಲ್ಲಿ ಬ್ಯಾರಿಕೇಡ ಹಾಕಲಾಗಿದೆ. ಯಾವುದೇ ರೀತಿಯ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ, ಗಾಂಧಿ ವೃತ್ತದಲ್ಲಿರುವ ಮಾರುಕಟ್ಟೆಯಲ್ಲಿರುವ ಎಲ್ಲಾ ದಿನಸಿ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ ಮಾಡಲಾಗಿತ್ತು. ಮಾರುಕಟ್ಟೆಗೆ ಪ್ರವೇಶ ನೀಡುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ ಮತ್ತು ಹಗ್ಗಗಳ ಮೂಲಕ ವಾಹನ ಸಂಚಾರವನ್ನು ನಿಷೇಧಿಸುವ ಸಲುವಾಗಿ ಬಂದ ಮಾಡಲಾಗಿದೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 