ತವರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸ್ವಾಗತ
A grand welcome for a soldier returning home
ಕೊಲ್ಹಾರ 3 : ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ತವರಿಗೆ ಮರಳಿದ ಸೈನಿಕನಿಗೆ ಬುಧವಾರ ಪಟ್ಟಣದಲ್ಲಿ ಅದ್ದೂರಿ ಸ್ವಾಗತ ಕೋರಲಾಗಿದೆ. ಕೊಲ್ಹಾರ ಪಟ್ಟಣ ನಿವಾಸಿ ಕೃಷ್ಣಾಜಿ ಸಾಬು ಪವಾರ ಎಂಬ ಯೋಧ ಭಾರತಿಯ ಸೇನಾಪಡೆಯಲ್ಲಿ ದೀರ್ಘಕಾಲ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿ ತವರಿಗೆ ಮರಳಿದ ಸೈನಿಕನನ್ನು ಪಟ್ಟಣದ ಪ್ರಮುಖ ಬೀದಿಗಳ ಮೂಲಕ ದಿಗಂಬರೇಶ್ವರ ಮಠದ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು ಬಳಿಕ ದಿಗಂಬರೇಶ್ವರ ಮಠದ ಪರಮ ಪೂಜ್ಯ ಕಲ್ಲಿನಾಥಶ್ರೀ, ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ , ಯುವ ಮುಖಂಡ ಕಲ್ಲಪ್ಪ ಸೋನ್ನದ ನಿವೃತ್ತ ಶಿಕ್ಷಕ ಬಸವರಾಜ ಹಂಗರಗಿ, ಪಡೆಪ್ಪ ನಾಗರಾಳ ಸೇರಿದಂತೆ ಅನೇಕ ಆತನ ಬಾಲ್ಯದ ಸ್ನೇಹಿತರು ಊರಿನ ಮುಖಂಡರು ತವರಿಗೆ ಮರಳಿದ ಸೈನಿಕನಿಗೆ ಹಾಗೂ ಆತನ ಪತ್ನಿಗೆ ಶುಭ ಕೋರಿ ಶಾಲು ಹೊದಿಸಿ ಸನ್ಮಾನಿಸಿದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 