ಜಿ ಸಿ ಬಯ್ಯಾರೆಡ್ಡಿ ನಿಧನ ಭಾವಪೂರ್ಣ ಶ್ರದ್ಧಾಂಜಲಿ
A heartfelt tribute to GC Bayareddy on his death
ಜಿ ಸಿ ಬಯ್ಯಾರೆಡ್ಡಿ ನಿಧನ ಭಾವಪೂರ್ಣ ಶ್ರದ್ಧಾಂಜಲಿ
ಇಂಡಿ 05 : ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ನಿಧನರಾದ ಸುದ್ದಿ ತಿಳಿದು ಇಂಡಿ ತಾಲ್ಲೂಕಿನ ಬಸನಾಳ ಗ್ರಾಮದ ಕನಕದಾಸರ ವೃತ ಬಳಿ ವಿಜಯಪೂರ ಜಿಲ್ಲೆಯ ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸವಾದಿ) ಕಾರ್ಯದರ್ಶಿಗಳು ಹಾಗೂ ರಾಜ್ಯ ಸಮಿತಿ ಸದಸ್ಯರಾದ ಭೀಮರಾಯ ಪೂಜಾರಿ ಅವರ ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಲವು ವರ್ಷಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಬಳಲುತ್ತಿದ್ದರು, ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು ಎಂದು ಇಲ್ಲಿ ಸ್ಮರಿಸಬಹುದಾಗಿದೆ.ಈ ಸಂದರ್ಭದಲ್ಲಿ ರೈತರಾದ ಮಲ್ಲು ಸಾಹುಕಾರ, ಲಕ್ಷ್ಮಣ ಬಡಿಗೇರ,ಸೋಮನಿಂಗ ಕಾಳಗಿ, ಪರಸ್ಪರ ಮೇಟ್ಟಗಾರ, ಮಲ್ಲಿಕಾರ್ಜುನ ಬಗಲಿ ಸೋಮನಿಂಗ ಖಜನಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 