ಪರಿಸರಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಸಾಲು ಮರದ ತಿಮ್ಮಕ್ಕರವರಿಗೆ ಭಾವಪೂರ್ಣ ಶ್ರದ್ಧಾಂಜಲಿ
A heartfelt tribute to Saalu Marada Thimmakka, who dedicated his entire life to the environment
ಹುಬ್ಬಳ್ಳಿ 14: ಪರಿಸರಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟು, ಸಸ್ಯಗಳ ಸಂರಕ್ಷಣೆಯಲ್ಲಿ ಅಮೋಘ ಸೇವೆ ಸಲ್ಲಿಸಿದ್ದ, ವೃಕ್ಷ ಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರು 114ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಕ್ಕೆ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆ ಮಹಾನ್ ದಿವ್ಯಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ ಹಾಗೂ ಕಂಬನಿ ಮಿಡಿದಿದ್ದಾರೆ. ಮರಗಳನ್ನು ಮಕ್ಕಳಂತೆ ಪೋಷಿಸಿದಂತಹ ಮಹಾನ್ ಪರಿಸರ ಪ್ರೇಮಿ, ಮುಂದಿನ ಜನಾಂಗಕ್ಕೆ ಪರಿಸರ ಪ್ರಜ್ಞೆಯನ್ನು ಜಾಗೃತಗೊಳಿಸುವ ಕಾರ್ಯ ಮಾಡಿದಂತಹ ಸಾಲು ಮರದ ತಿಮ್ಮಕ್ಕ ಅಮರರಾಗಿದ್ದಾರೆ ಎಂದು ಎಂದು ಸ್ಮರಣೆ ಮಾಡುತ್ತಾ ಅವರ ಅಗಲಿಕೆ ತುಂಬಾ ನೋವು ತಂದಿದೆ ಎಂದು ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಐಎಂಎದ ಮಾಜಿ ಅಧ್ಯಕ್ಷ ಡಾ.ವಿ.ಬಿ.ನಿಟಾಲಿ,ಪ್ರೊ ಎಸ್.ಎಂ.ಸಾತ್ಮಾರ, ಡಾ. ಮಹೇಶ ಡಿ. ಹೊರಕೇರಿ ಪ್ರೊ ಎಸ್.ವಿ.ಪಟ್ಟಣಶೆಟ್ಟಿ, ಡಾ.ಪಿ.ಎನ್.ಬಿರಾದಾರ, ಡಾ. ಎಸ್.ಪಿ.ಬಳಿಗಾರ, ಡಾ. ಕೆ.ಎಫ್.ಕಮ್ಮಾರ, ಡಾ. ಸುನೀಲ ಗೋಖಲೆ, ಡಾ. ಮಂಜುನಾಥ ನೇಕಾರ, ಡಾ. ಧನಪಾಲ ಹೆಗಡೆ, ಡಾ. ಲಿಂಗರಾಜ ಡಿ. ಹೊರಕೇರಿ ಡಾ. ಸರ್ವಮಂಗಳಾ ಕುದರಿ, ಶಾಂತಪ್ಪ ವಿ. ಹೂಗಾರ, ಶಕುಂತಲಾ ಶಾಂತಪ್ಪ ಹೂಗಾರ, ಬಸವರಾಜ ಡಿ. ಅಳ್ಳಗಿ, ಸಿದ್ದಯ್ಯ ಹಿರೇಮಠ, ಮೃತ್ಯುಂಜಯ ಮಟ್ಟಿ, ಚನಬಸಪ್ಪ ಧಾರವಾಡಶೆಟ್ಟರ, ವಿರುಪಾಕ್ಷ ಕಟ್ಟಿಮನಿ, ಎಸ್.ಐ.ನೇಕಾರ, ಶಿವಯೋಗಿ ಮುಗಬಸ್ತ, ಸುನಂದಾ ಮುಗಭಸ್ತ, ಎಂಟಿ.ರಾಥೋಡ, ಸುಭಾಸ ಚವ್ಹಾಣ, ಡಾ. ವಂದನಾ ಕರಾಳೆ, ಪ್ರೊ ಎಸ್.ಆರ್.ಆಶಿ, ವೀರಣ್ಣ ಹೂಲಿ, ಭಾರತಿ ವಾಲಿ, ಡಾ. ಬಸವಕುಮಾರತಲವಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆ ಮಹಾನ್ ದಿವ್ಯಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ ಹಾಗೂ ಕಂಬನಿ ಮಿಡಿದಿದ್ದಾರ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 