ಮನನೊಂದು ವ್ಯಕ್ತಿ ನೇಣಿಗೆ ಶರಣು
A man of conscience surrendered to the gallows
ಜಮಖಂಡಿ 06: ನಗರದ ರಾಮೇಶ್ವರ ಕಾಲೋನಿಯಲ್ಲಿ ವ್ಯಕ್ತಿಯೊರ್ವನು ಮನೆಯಲ್ಲಿ ಮನನೊಂದು ನೇಣು ಬಿಗ್ಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ರಾಮೇಶ್ವರ ಕಾಲೋನಿ ನಿವಾಸಿಯಾದ ಆನಂದ ಅರವಿಂದ ಬೆಳವಡಿ (36) ನೇಣು ಬಿಗ್ಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಟೇಲರಿಂಗ್ ಕೆಲಸವನ್ನು ಮಾಡುತ್ತಿದ್ದ ಎನ್ನಲಾಗಿದೆ. ರಾಮೇಶ್ವರ ಕಾಲೋನಿ ಸಮುದಾಯ ಭವನದ ಹತ್ತಿರ ಟೇಲರಿಂಗ್ ಕೆಲಸ ಮಾಡಿಕೊಂಡಿದ್ದು. ಕೆಲವು ದಿನಗಳ ಹಿಂದೆ ಸಾಲವನ್ನು ಮಾಡಿಕೊಂಡು ಅದನ್ನು ಮರಳಿ ಹಣವನ್ನು ನೀಡಿದ ಬಳಿಕ ಜೀವನದಲ್ಲಿ ಜುಗುಪ್ಸೆಕೊಂಡು ಹಾಗೂ ಮನನೊಂದು ಸಾರಾಯಿ ಚಟ್ಟಕ್ಕೆ ಅಂಟಿಕೊಂಡದ್ದು. ಟೇಲರಿಂಗ್ ಕೆಲಸ ಮಾಡುವ ಕೆಳ ಮಹಡ್ಡಿಯಲ್ಲಿ ನೇಣು ಬಿಗ್ಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ. ಈ ಕುರಿತು ಶಹರ ಪೋಲಿಸ್ ಠಾಣೆಯ ಪಿಎಸ್ಐ ಅನೀಲ ಕುಂಬಾರ ಭೇಟಿ ನೀಡಿ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 