ರೈತಪರ ಪ್ರಾಮಾಣಿಕತೆ ಮರೆದ ಸುದ್ದಿವಾಹಿನಿ : ಖಾದ್ರಿ
A news channel that has forgotten its pro-farmer honesty: Qadri
ರೈತಪರ ಪ್ರಾಮಾಣಿಕತೆ ಮರೆದ ಸುದ್ದಿವಾಹಿನಿ : ಖಾದ್ರಿ
ಶಿಗ್ಗಾವಿ 23 : ರೈತಪರ ನಿರಂತರವಾಗಿ 7 ವರ್ಷಗಳ ಕಾಲ ಪ್ರಾಮಾಣಿಕತೆ ನಿಷ್ಠೆಯಿಂದ ರೈತದ್ವನಿ ಸುದ್ದಿವಾಹಿನಿ ಸಾಗುತ್ತಾ ಬಂದಿದೆ ಮುಂದಿನ ದಿನಗಳಲ್ಲಿ ಯಶಸ್ವಿಯಾಗಿ ಸಾಗಲಿ ಹಾಗೂ ರೈತರ ದ್ವನಿಯಾಗಲಿ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಶುಭ ಹಾರೈಸಿದರು. ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರೈತದ್ವನಿ ಕ್ರಿಕೆಟ ಪಂದ್ಯಾವಳಿ ಉದ್ದೇಶಿಸಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದರು. ರೈತ ದ್ವನಿ ವಾಹಿನಿಯ 7ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಹಾವೇರಿ ಜಿಲ್ಲಾ ಮಟ್ಟದ ಮುಕ್ತ ಹಾಪ ಪಿಚ್ ಕ್ರಿಕೆಟ್ ಟೂರ್ನಮೆಂಟ್ ಅನ್ನು ರೈತದ್ವನಿ ಸಂಪಾದಕ ಬಸವರಾಜ ಕುರಗೋಡಿ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ರವಿ ಕೊರವರ, ಪುರಸಭೆ ಸದಸ್ಯೆ ವಸಂತಾ ಬಾಗೂರ, ರೈತ ಮುಖಂಡ ಬಸಲಿಂಗಪ್ಪ ನರಗುಂದ, ಯುವ ಮುಖಂಡ ಅರುಣ್ ಮೆಕ್ಕಿ, ವಿಠಲ್ ಭಜಂತ್ರಿ ಮಂಜುನಾಥ್ ಹೆಚ್, ಪ್ರದೀಪ ನಿಮಣ್ಣವರ, ವಿನಾಯಕ ನಾರಾಯಣಪುರ, ಆರ್ಯನ್ ಕುರಗೋಡಿ, ವಿಕಾಸ್ ಸಾಲಿಮಠ ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 