ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರು ಮುಖ್ಯಮಂತ್ರಿಗಳಿಗೆ ಬರೆದ ಅಂಚೆಪತ್ರ ಪ್ರದರ್ಶನ
ಲೋಕದರ್ಶನ ವರದಿ
ಕಂಪ್ಲಿ 27:ಶಿಕ್ಷಕರ ಒಳಿತಿಗಾಗಿ ಕೂಡಲೇ ಸ್ಥಗಿತಗೊಂಡಿರುವ ಶಿಕ್ಷಕರ ವಗರ್ಾವಣೆ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ರಾಜ್ಯ ಸಕರ್ಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದಶರ್ಿ ಈರಪ್ಪ ಸೊರಟೂರು ಆಗ್ರಹಿಸಿದರು.
ತಾಲೂಕಿನ ಪ್ರಧಾನ ಅಂಚೆ ಕಛೇರಿ ಮುಂಭಾಗದಲ್ಲಿ ಬುಧವಾರ ಸಕರ್ಾರಿ ಗ್ರಾಮೀಣ ಶಿಕ್ಷಕರ ಸಂಘದ ತಾಲೂಕು ಘಟಕವು ಹಮ್ಮಿಕೊಂಡ ಅಂಚೆಪತ್ರ ಚಳುವಳಿಯ ಅಂಗವಾಗಿ, ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಅಂಚೆಪತ್ರಗಳನ್ನು ಪ್ರದಶರ್ಿಸಿ ಮಾತನಾಡಿ, ಗ್ರಾಮೀಣ ಶಿಕ್ಷಕರಿಗೆ 2500ರೂ.ಗಳ ಮಾಸಿಕ ಗ್ರಾಮೀಣ ಭತ್ಯೆಯನ್ನು ನೀಡಬೇಕು. ಪದವಿಧರ ಶಿಕ್ಷಕರನ್ನು 6ರಿಂದ 8ನೇವರ್ಗಕ್ಕೆ ಎಜಿಟಿಗೆ ವಿಲೀನಗೊಳಿಸಬೇಕು. ತಜ್ಞರ ಸಭೆ ನಡೆಸಿ ಎನ್ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಗ್ರಾಮೀಣ ಕೃಪಾಂಕ ಹಾಗೂ ಕೃಪಾಂಕ ರಹಿತ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬರೆದ ಅಂಚೆಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿ ಸಾರ್ವಜನಿಕರ ಗಮನಸೆಳೆದರು.
ಅಂಚೆ ಪತ್ರ ಚಳುವಳಿಯಲ್ಲಿ ರಾಜ್ಯ ಸಕರ್ಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗರಾಜ ನಾಯ್ಕ, ಸಹ ಕಾರ್ಯದಶರ್ಿ ಎನ್.ನೇತ್ರಾವತಿ, ಪ್ರಧಾನ ಕಾರ್ಯದಶರ್ಿ ವಿ.ಮುನಿಯನಾಯ್ಕ, ಸಂಘಟನಾ ಕಾರ್ಯದಶರ್ಿ ಎಚ್.ಗಿರಿಜಾ, ಖಜಾಂಚಿ ವಿ.ಪಕ್ಕೀರಪ್ಪ, ಮರಿಸ್ವಾಮಿ, ಎಚ್.ಜಡಿಯಪ್ಪ, ಯು.ಮಂಜುನಾಥ, ಎನ್ಪಿಎಸ್ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ, ಕರಿಬಸಪ್ಪ, ರಾಜಶೇಖರ್ ಹಾಗೂ ಗ್ರಾಮೀಣ ಭಾಗದ ಶಿಕ್ಷಕರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 