ಗ್ಯಾರಂಟಿ ಯೋಜನೆಗಳ ಕುರಿತ ಬೀದಿ ನಾಟಕ
A street play on guarantee schemes
ಗ್ಯಾರಂಟಿ ಯೋಜನೆಗಳ ಕುರಿತ ಬೀದಿ ನಾಟಕ
ಬಳ್ಳಾರಿ 17:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಚಿಗುರು ಕಲಾ ತಂಡ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಐದು ಗ್ಯಾರಂಟಿ ಯೋಜನೆ ಹಾಗೂ ವಿವಿಧ ಯೋಜನೆಗಳ ಕುರಿತು ಸಂಡೂರು ತಾಲ್ಲೂಕಿನ ಹೊಸ ದರೋಜಿ ಗ್ರಾಮದಲ್ಲಿ ಸೋಮವಾರ ಬೀದಿ ನಾಟಕ ಹಮ್ಮಿಕೊಳ್ಳಲಾಗಿತ್ತು.
ದರೋಜಿ ಗ್ರಾಪಂ ಅಧ್ಯಕ್ಷೆ ಕೆ.ಗೀತ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು, ಜನ ಸಾಮಾನ್ಯರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಿದ್ದಲಿಂಗಪ್ಪ ಅವರು ಮಾತನಾಡಿ, ಸರ್ಕಾರದಿಂದ ಜನಸಾಮಾನ್ಯರಿಗೆ ದೊರೆಯುವ ವಿವಿಧ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜನೋಸ್ತಮದಿಂದ ಸೇರಿದ್ದು ವಿಶೇಷಗಿದ್ದು, ಬೀದಿ ನಾಟಕ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಉತ್ತಮ ಮೆಚ್ಚುಗೆ ಸಂದಿದೆ ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಮಾಯಣ್ಣ, ಕೊಟ್ರಮ್ಮ, ಗ್ರಾಮದ ಹಿರಿಯರು, ಚಿಗುರು ತಂಡದ ಕಲಾವಿದರಾದ ಹುಲುಗಪ್ಪ ಎಸ್.ಎಂ., ಎಚ್.ರಮೇಶ, ಬಿ.ಆನಂದ, ಹೆಚ್.ಎರಿಸ್ವಾಮಿ, ಎಂ.ನವೀನ್, ವೈ.ತಾಯಪ್ಪ, ಎಚ್.ಗಂಗಮ್ಮ, ವೈ.ರುತಮ್ಮ ಸೇರಿದಂತೆ ಸಾರ್ವಜನಿಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 