ರಸ್ತೆ ವಿಭಜಕಕ್ಕೆ ಕಬ್ಬು ತುಂಬಿದ ಟ್ಯಾಕ್ಟರ್ ಡಿಕ್ಕಿ: ದೀಪ ಕಂಬ ನೆಲಕ್ಕೆ
ರಾಯಬಾಗ 18: ಕಬ್ಬು ತುಂಬಿಕೊಂಡು ಸಕ್ಕರೆ ಕಾಖರ್ಾನೆಗೆ ಹೋಗುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ವಿಭಜಕ(ಡಿವೈಡರ್) ಕಿತ್ತು ಹೋಗಿ, ಬೀದಿ ದೀಪ ಕಂಬ ನೆಲಕ್ಕೆ ಉರಳಿದ ಘಟನೆ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಮಹಾವೀರ ಭವನ ಹತ್ತಿರದ ರಾಯಬಾಗ-ಅಂಕಲಿ ಮುಖ್ಯರಸ್ತೆಯಲ್ಲಿ ಅಳವಡಿಸಿರುವ ರಸ್ತೆ ವಿಭಜಕಕ್ಕೆ ಕಬ್ಬು ತುಂಬಿದ ಟ್ಯಾಕ್ಟರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಟ್ಯಾಕ್ಟರ್ ಡಿಕ್ಕಿ ಹೊಡೆದ ರಭಸಕ್ಕೆ ವಿಭಜಕ ಕಿತ್ತು ಹೋಗಿ, ಅಲ್ಲಿ ಅಳವಡಿಸಿದ್ದ ಬೀದಿ ದೀಪ ಕಂಬ ನೆಲಕ್ಕೆ ಉರಳಿದೆ. ಬೆಳಿಗಿನ ಜಾವ ಈ ಘಟನೆ ಸಂಭವಿಸಿದ್ದರಿಂದ ಜನರ ಸಂಚಾರ ವಿರಳವಾಗಿದ್ದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಬಿದ್ದಿರುವ ಕಬ್ಬನ್ನು ಬೇರೆ ವಾಹನದ ಮೂಲಕ ತುಂಬಿ ಸಾಗಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 